Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:23 - ಪರಿಶುದ್ದ ಬೈಬಲ್‌

23 ರಣರಂಗದಲ್ಲಿ ಅರಸನಾದ ಯೋಷೀಯನಿಗೆ ಬಾಣಗಳು ತಾಗಿದ್ದವು. ಆಗ ತನ್ನ ಸೇವಕರಿಗೆ, “ನನ್ನನ್ನು ಇಲ್ಲಿಂದ ಕೊಂಡೊಯ್ಯಿರಿ. ನಾನು ತೀವ್ರವಾಗಿ ಗಾಯಗೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು, ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಲ್ಲಿ ಬಿಲ್ಲುಗಾರರು ಅರಸ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು. ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ - ನನಗೆ ದೊಡ್ಡ ಗಾಯವಾಯಿತು. ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:23
8 ತಿಳಿವುಗಳ ಹೋಲಿಕೆ  

ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.


ಆತನು ನನ್ನ ಹೊಟ್ಟೆಗೆ ತನ್ನ ಬಾಣಗಳಿಂದ ಹೊಡೆದನು.


ಆದರೆ ಒಬ್ಬ ಸಿಪಾಯಿಯು ಬಿಲ್ಲು ತೆಗೆದು ಬಾಣವನ್ನು ಹೂಡಿ ಗುರಿಯಿಲ್ಲದೆ ಹೊಡೆದಾಗ ಆ ಬಾಣವು ಬಂದು ಇಸ್ರೇಲರ ರಾಜನಾದ ಅಹಾಬನಿಗೆ ತಾಗಿತು. ಅವನ ಕವಚದ ಸಂದಿನಿಂದ ಅವನ ದೇಹದೊಳಗೆ ಹೊಕ್ಕಿತು. ಆಗ ಅವನು ತನ್ನ ರಥವನ್ನೋಡಿಸುವ ರಾಹುತನಿಗೆ, “ರಥವನ್ನು ಹಿಂದಕ್ಕೆ ತಿರುಗಿಸಿ ನನ್ನನ್ನು ರಣರಂಗದಿಂದ ಹೊರಕ್ಕೆ ಕರೆದುಕೊಂಡು ಹೋಗು. ನಾನು ಗಾಯಗೊಂಡಿದ್ದೇನೆ” ಅಂದನು.


ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಛೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು.


ರಾಜ ಯೋರಾಮನು ಹಜಾಯೇಲನ ವಿರುದ್ಧವಾಗಿ ಹೋರಾಡಿದಾಗ ರಾಮಾದಲ್ಲಿ ಅರಾಮ್ಯದಿಂದ ತನಗಾದ ಗಾಯಗಳನ್ನು ಗುಣಪಡಿಸಿಕೊಳ್ಳಲು ಇಸ್ರೇಲಿನ ರಾಜನು ಇಜ್ರೇಲ್ ಎಂಬ ಪಟ್ಟಣಕ್ಕೆ ಹಿಂತಿರುಗಿದನು. ಯೆಹೂದದ ರಾಜನೂ ಯೆಹೋರಾಮನ ಮಗನೂ ಆದ ಅಹಜ್ಯನು, ಅಹಾಬನ ಮಗನಾದ ಯೋರಾಮನನ್ನು ನೋಡಲು ಇಜ್ರೇಲಿಗೆ ಹೋದನು. ಯಾಕೆಂದರೆ ಅವನಿಗೆ ಕಾಯಿಲೆಯಾಗಿತ್ತು.


ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು. ಬಿಲ್ಲುಗಳನ್ನು ಹೊಂದಿದ್ದ ಜನರು ಅವನನ್ನು ಇಷ್ಟಪಡಲಿಲ್ಲ.


ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.


ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು