Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:7 - ಪರಿಶುದ್ದ ಬೈಬಲ್‌

7 ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೋಷೀಯನು, ಹಬ್ಬಕ್ಕೆ ಬಂದ ಜನರಿಗೆ ಪಾಸ್ಕ ಬಲಿಗಾಗಿ ಆಸ್ಥಾನದ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:7
10 ತಿಳಿವುಗಳ ಹೋಲಿಕೆ  

ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.


ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.


ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ಹಿಜ್ಕೀಯನು ತನ್ನ ಪಶುಗಳಲ್ಲಿ ಕೆಲವನ್ನು ಸರ್ವಾಂಗಹೋಮಕ್ಕಾಗಿ ಕೊಟ್ಟನು. ಇವುಗಳನ್ನು ಪ್ರತಿನಿತ್ಯದ ಬೆಳಿಗ್ಗೆ ಮತ್ತು ಸಂಜೆ ಸಮರ್ಪಿಸುವ ಸರ್ವಾಂಗಹೋಮಗಳಿಗಾಗಿ ಉಪಯೋಗಿಸಿಕೊಳ್ಳಲಾಯಿತು; ಅಲ್ಲದೆ ಸಬ್ಬತ್ ದಿನದಂದೂ ಅಮವಾಸ್ಯೆ ದಿನದಂದೂ ಅವುಗಳನ್ನು ಅರ್ಪಿಸಿದರು. ಇವೆಲ್ಲಾ ದೇವರ ಕಟ್ಟಳೆಗಳಿಗನುಸಾರವಾಗಿದ್ದವು.


ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.


ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.


ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.


ಹಬ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು