2 ಪೂರ್ವಕಾಲ ವೃತ್ತಾಂತ 36:10 - ಪರಿಶುದ್ದ ಬೈಬಲ್10 ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿ |
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)
ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.