Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:14 - ಪರಿಶುದ್ದ ಬೈಬಲ್‌

14 ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪ್ರಧಾನಯಾಜಕರೂ ಪ್ರಜೆಗಳೂ ಕೂಡಾ ಮಹಾದ್ರೋಹಿಗಳಾಗಿ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇವಿುನ ದೇವಾಲಯವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:14
26 ತಿಳಿವುಗಳ ಹೋಲಿಕೆ  

“ಯೆಹೋವನೇ, ನಾವೆಲ್ಲರೂ ನಾಚಿಕೆಪಡಬೇಕು. ನಮ್ಮ ಎಲ್ಲ ರಾಜರು, ನಾಯಕರು ನಾಚಿಕೆಪಟ್ಟುಕೊಳ್ಳಬೇಕು. ನಮ್ಮ ಹಿರಿಯರು ನಾಚಿಕೆಪಡಬೇಕು. ಏಕೆಂದರೆ ನಾವು ನಿನ್ನ ವಿಷಯದಲ್ಲಿ ಪಾಪ ಮಾಡಿದ್ದೇವೆ.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಆ ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.


“‘ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.


ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!


ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.


ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕೆಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.


“ನೀವು ನನ್ನ ಸಬ್ಬತ್ ದಿನಗಳನ್ನು ಅನುಸರಿಸಬೇಕು. ನನ್ನ ವಿಶ್ರಾಂತಿಯ ವಿಶೇಷ ದಿನಗಳಲ್ಲಿ ನೀವು ಕೆಲಸ ಮಾಡಬಾರದು. ನೀವು ನನ್ನ ಪವಿತ್ರಸ್ಥಳವನ್ನು ಗೌರವಿಸಬೇಕು. ನಾನೇ ಯೆಹೋವನು!


“ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ಪದ್ದತಿಗಳನ್ನು ಅನುಸರಿಸಬಾರದು.


ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.


ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು