Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:19 - ಪರಿಶುದ್ದ ಬೈಬಲ್‌

19 ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 [ಅವನ ಜನರು] ಯೆರೂಸಲೇವಿುನ ಪೌಳಿಗೋಡೆಗಳನ್ನು ಕೆಡವಿ ಅವರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟುಬಿಟ್ಟು ಅಮೂಲ್ಯ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:19
22 ತಿಳಿವುಗಳ ಹೋಲಿಕೆ  

ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.


ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.


ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.


ಯಾಕೆಂದರೆ ಆ ಜನಾಂಗಗಳು ಯಾಕೋಬ್ಯರನ್ನೂ ಅವರ ದೇಶವನ್ನೂ ನಾಶಮಾಡಿದರು.


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’” ಇದು ಯೆಹೋವನಿಂದ ಬಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’”


“ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”


ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.


ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.


ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.


ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು