Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:19 - ಪರಿಶುದ್ದ ಬೈಬಲ್‌

19 ಸೊಲೊಮೋನನು ದೇವಾಲಯದೊಳಗೆ ಉಪಯೋಗಿಸುವ ಉಪಕರಣಗಳನ್ನು ಮಾಡಿಸಿದನು. ಅವನು ಬಂಗಾರದ ಯಜ್ಞವೇದಿಕೆಯನ್ನು ಮಾಡಿಸಿದನು; ನೈವೇದ್ಯದ ರೊಟ್ಟಿಗಳನ್ನು ಇಡಲು ಮೇಜುಗಳನ್ನು ಮಾಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿ ಇವು: ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ದೇವಾಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸೊಲೊಮೋನನು ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು, ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಮೇಜುಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:19
21 ತಿಳಿವುಗಳ ಹೋಲಿಕೆ  

ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು.


ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ಎರಡು ವರ್ಷಗಳೊಳಗಾಗಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನ್ನು ಹಿಂದಕ್ಕೆ ತರುವೆನು. ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನ್ನು ಜೆರುಸಲೇಮಿಗೆ ತರುತ್ತೇನೆ.


ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು.


ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.


ಅವನು ಹತ್ತು ಮೇಜುಗಳನ್ನು ಮಾಡಿಸಿ ಅವುಗಳಲ್ಲಿ ಐದನ್ನು ದೇವಾಲಯದ ಬಲಗಡೆಯಲ್ಲಿಯೂ ಉಳಿದ ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಅನಂತರ ಸೊಲೊಮೋನನು ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಪವಿತ್ರವಾದ ರೊಟ್ಟಿಯನ್ನು ಇಡುವ ಮೇಜನ್ನು ತಯಾರಿಸಲು ಎಷ್ಟು ಬಂಗಾರ ಬೇಕಾಗುತ್ತದೆ ಮತ್ತು ಬೆಳ್ಳಿಯಿಂದ ಮಾಡುವ ಮೇಜಿಗೆ ಎಷ್ಟು ಬೆಳ್ಳಿ ಬೇಕಾಗುತ್ತದೆ ಎಂಬುದನ್ನು ಸಹ ದಾವೀದನು ತಿಳಿಸಿದನು.


ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿದ್ದ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ನೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು