Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:22 - ಪರಿಶುದ್ದ ಬೈಬಲ್‌

22 ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾ ಪವಿತ್ರಸ್ಥಳದೊಳಗಣ ಬಾಗಿಲಿನ ಕದಗಳು; ಪವಿತ್ರಸ್ಥಳದ ಕದಗಳು ಇವುಗಳನ್ನೆಲ್ಲಾ ಅಪ್ಪಟ ಬಂಗಾರದಿಂದ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಚೊಕ್ಕಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಗೆ, ದೇವಾಲಯದ ಮಹಾಪರಿಶುದ್ಧಸ್ಥಳದೊಳಗಣ ಬಾಗಲಿನ ಬಂಗಾರಕದಗಳು, ಪರಿಶುದ್ಧಸ್ಥಳದ ಬಂಗಾರ ಕದಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:22
12 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಸೈನಿಕರು ಪವಿತ್ರಾಲಯದಿಂದ ಪಾತ್ರೆಗಳು, ಸಲಿಕೆಗಳು, ಕತ್ತರಿಗಳು, ದೊಡ್ಡ ಬೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಬಾಬಿಲೋನಿನವರು ದೇವಾಲಯದಲ್ಲಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ವಸ್ತುಗಳನ್ನು ತೆಗೆದುಕೊಂಡು ಹೋದರು.


ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿಬಂಗಾರಗಳ ಪಾತ್ರೆಗಳಿಗೆ ಉಪಯೋಗಿಸದೆ ಕೆಲಸಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು ದೇವಾಲಯವನ್ನು ಸರಿಪಡಿಸಿದರು.


ಅವನು ಈ ದೀಪಸ್ತಂಭಕ್ಕೆ ಏಳು ಹಣತೆಗಳನ್ನು ಮಾಡಿದನು; ಬಳಿಕ ಅಪ್ಪಟ ಬಂಗಾರದಿಂದ ಬತ್ತಿಗಳನ್ನು ಸರಿಪಡಿಸುವ ಕತ್ತರಿಗಳನ್ನೂ ಹರಿವಾಣಗಳನ್ನೂ ಮಾಡಿದನು.


ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು.


“ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.


ಸೊಲೊಮೋನನು ಹಣತೆ, ಹೂವು, ಅಗ್ಗಿಷ್ಟಿಕೆ ಇವುಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಿದನು;


ಯೆಹೋವದೇವರ ಆಲಯಕ್ಕೆ ಸೊಲೊಮೋನನು ಮಾಡಬೇಕಾಗಿದ್ದ ಕೆಲಸವೆಲ್ಲವೂ ಮುಗಿಯಿತು. ದಾವೀದನು ದೇವಾಲಯಕ್ಕಾಗಿ ಕೊಟ್ಟಿದ್ದ ವಸ್ತುಗಳನ್ನೆಲ್ಲಾ ಸೊಲೊಮೋನನು ತಂದಿರಿಸಿದನು; ಬೆಳ್ಳಿಬಂಗಾರಗಳಿಂದ ಮಾಡಿದ ಸಾಮಾನುಗಳನ್ನು ಸೊಲೊಮೋನನು ದೇವಾಲಯದ ಭಂಡಾರದ ಕೋಣೆಗಳಲ್ಲಿ ಇಡಿಸಿದನು.


ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು.


ಒಂದೊಂದು ಬಾಗಿಲಿಗೆ ಎರಡೆರಡು ಚಿಕ್ಕ ಬಾಗಿಲುಗಳು ಅಂದರೆ ಎರಡೆರಡು ಮಡಚುವ ಬಾಗಿಲುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು