Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:1 - ಪರಿಶುದ್ದ ಬೈಬಲ್‌

1 ಯೆಹೋವದೇವರ ಆಲಯಕ್ಕೆ ಸೊಲೊಮೋನನು ಮಾಡಬೇಕಾಗಿದ್ದ ಕೆಲಸವೆಲ್ಲವೂ ಮುಗಿಯಿತು. ದಾವೀದನು ದೇವಾಲಯಕ್ಕಾಗಿ ಕೊಟ್ಟಿದ್ದ ವಸ್ತುಗಳನ್ನೆಲ್ಲಾ ಸೊಲೊಮೋನನು ತಂದಿರಿಸಿದನು; ಬೆಳ್ಳಿಬಂಗಾರಗಳಿಂದ ಮಾಡಿದ ಸಾಮಾನುಗಳನ್ನು ಸೊಲೊಮೋನನು ದೇವಾಲಯದ ಭಂಡಾರದ ಕೋಣೆಗಳಲ್ಲಿ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗೆ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ, ತನ್ನ ತಂದೆಯಾದ ದಾವೀದನು ಯೆಹೋವನಿಗೆ ಪ್ರತಿಷ್ಠೆ ಮಾಡಿದ್ದ ಬೆಳ್ಳಿಯನ್ನು, ಬಂಗಾರವನ್ನೂ, ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಮುಡುಪಾಗಿಟ್ಟ ಬೆಳ್ಳಿ ಬಂಗಾರವನ್ನೂ ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:1
7 ತಿಳಿವುಗಳ ಹೋಲಿಕೆ  

ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.


“ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.


ದಾವೀದನು ಆ ವಸ್ತುಗಳನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದನು. ಅವನು ಅನ್ಯದೇಶಗಳನ್ನು ಸೋಲಿಸಿದ್ದಾಗ ಯೆಹೋವನಿಗೆ ಸಮರ್ಪಿಸಿದ್ದ ಬೆಳ್ಳಿ ಮತ್ತು ಚಿನ್ನಗಳೊಂದಿಗೆ ಇವುಗಳನ್ನೂ ಸೇರಿಸಿದನು.


ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.


ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾ ಪವಿತ್ರಸ್ಥಳದೊಳಗಣ ಬಾಗಿಲಿನ ಕದಗಳು; ಪವಿತ್ರಸ್ಥಳದ ಕದಗಳು ಇವುಗಳನ್ನೆಲ್ಲಾ ಅಪ್ಪಟ ಬಂಗಾರದಿಂದ ಮಾಡಿಸಿದನು.


ಹೀರಾಮನು ದೇವಾಲಯದ ದಕ್ಷಿಣದ ಕಡೆಗೆ ಐದು ಬಂಡಿಗಳನ್ನು ಮತ್ತು ಇತರ ಐದು ಬಂಡಿಗಳನ್ನು ಉತ್ತರದ ಕಡೆಗೆ ಇಟ್ಟನು. ಅವನು ಆ ದೊಡ್ಡ ಜಲಾಶಯವನ್ನು ದೇವಾಲಯದ ಆಗ್ನೇಯ ದಿಕ್ಕಿನಲ್ಲಿ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು