2 ಪೂರ್ವಕಾಲ ವೃತ್ತಾಂತ 5:13 - ಪರಿಶುದ್ದ ಬೈಬಲ್13 ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 [ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.