Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:20 - ಪರಿಶುದ್ದ ಬೈಬಲ್‌

20 ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:20
17 ತಿಳಿವುಗಳ ಹೋಲಿಕೆ  

ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ.


ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)


“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಯೆಹೋವನೇ, ದಯವಿಟ್ಟು ನನ್ನ ಮಾತುಗಳನ್ನು ಆಲಿಸು! ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು, ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪನಾದ ದೇವರನ್ನು ನಿಂದಿಸಿ ಕಳುಹಿಸಿರುವ ಈ ವಾಕ್ಯವನ್ನು ಕೇಳು!


ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನನ್ನ ಪ್ರಾರ್ಥನೆಗೆ ಲಕ್ಷ್ಯಕೊಡು ಎಂದು ನಿನ್ನನ್ನು ಬೇಡುತ್ತೇನೆ. ದೇವರಾದ ಯೆಹೋವನೇ, ನನ್ನ ಬೇಡಿಕೆಗಳನ್ನು ಮತ್ತು ಸ್ತೋತ್ರಗಳನ್ನು ಲಾಲಿಸು. ನಾನು ನಿನ್ನ ಸೇವಕನಾಗಿದ್ದೇನೆ.


ನಿಮ್ಮನ್ನು ದೃಷ್ಟಿಸಿ ನಿಮ್ಮ ಪ್ರಾರ್ಥನೆಗಳಿಗೆ ಕಿವಿಗೊಡುವೆನು.


ಅವರು, ‘ನಮಗೆ ಖಡ್ಗ, ಕಾಯಿಲೆ, ಬರ, ಶಿಕ್ಷೆಗಳಿಂದ ಸಂಕಷ್ಟ ಉಂಟಾದರೆ ನಾವು ನಿನ್ನ ಮತ್ತು ನಿನ್ನ ಆಲಯದೆದುರು ನಿಂತು ನಿನಗೆ ಮೊರೆಯಿಡುವಾಗ ನೀನು ನಮ್ಮ ಮೊರೆಯನ್ನು ಕೇಳಿ ನಮಗೆ ಸಹಾಯ ಮಾಡುವೆ. ನಿನ್ನ ಹೆಸರು ಈ ಆಲಯದ ಮೇಲಿದೆ’ ಎಂದು ಹೇಳಿದರು.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.


‘ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.


ನನ್ನ ದೇವರೇ, ಈ ಸ್ಥಳದಲ್ಲಿ ಪ್ರಾರ್ಥಿಸುವ ನಮ್ಮನ್ನು ವೀಕ್ಷಿಸಿ ನಮ್ಮ ಪ್ರಾರ್ಥನೆಗೆ ಕಿವಿಗೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು