Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:32 - ಪರಿಶುದ್ದ ಬೈಬಲ್‌

32 “ಇಸ್ರೇಲಿನವನಲ್ಲದ ಪರದೇಶಿಯು ನಿನ್ನ ಪರಾಕ್ರಮವನ್ನೂ ನಿನ್ನ ಸಾಮರ್ಥ್ಯವನ್ನೂ ಕಂಡು ಕೇಳಿ ಇಲ್ಲಿಗೆ ಬಂದು ಈ ಆಲಯದ ಮುಂದೆ ನಿಂತುಕೊಂಡು ನಿನಗೆ ಪ್ರಾರ್ಥಿಸುವದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ತಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದಂಥ ಒಬ್ಬ ಪರದೇಶಿಯು ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ಸಂದೇಶವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಸೇರದಂಥ ಒಬ್ಬೊಬ್ಬ ಪರದೇಶಿಯೂ ನಿನ್ನ ನಾಮಮಹತ್ತು ಭುಜಬಲ ಶಿಕ್ಷಾಹಸ್ತ ಇವುಗಳ ವರ್ತಮಾನ ಕೇಳಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ಮಹಾನಾಮದ ನಿಮಿತ್ತ ದೂರದೇಶದಿಂದ ಬಂದ ಒಬ್ಬ ಪರದೇಶಿಯು, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:32
31 ತಿಳಿವುಗಳ ಹೋಲಿಕೆ  

ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.


ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು,


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ಎಷ್ಟೋ ಜನರು, ಎಷ್ಟೋ ಬಲಶಾಲಿ ಜನಾಂಗಗಳು ಜೆರುಸಲೇಮಿಗೆ ಸರ್ವಶಕ್ತನಾದ ಯೆಹೋವನನ್ನು ಕಂಡುಕೊಳ್ಳಲೂ ಆತನನ್ನು ಆರಾಧಿಸಲೂ ಬರುವರು.


ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.


ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು.


“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.


ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ!


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”


ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.


ಅದಕ್ಕೆ ರೂತಳು, “ನಿನ್ನನ್ನು ಬಿಟ್ಟು ಸ್ವಜನರ ಬಳಿಗೆ ಹಿಂದಿರುಗಿ ಹೋಗೆಂದು ನನಗೆ ಒತ್ತಾಯ ಮಾಡಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು. ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು. ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.


“ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಆಗ, ನಮ್ಮ ಪೂರ್ವಿಕರಿಗೆ ನೀನು ಅನುಗ್ರಹಿಸಿದ ದೇಶದಲ್ಲಿರುವ ನಿನ್ನ ಜನರು ನಿನಗೆ ಭಯಭಕ್ತಿಯಿಂದ ಸೇವೆ ಮಾಡುವರು.


ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು. ಆತನ ಪ್ರೀತಿ ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು