Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:5 - ಪರಿಶುದ್ದ ಬೈಬಲ್‌

5 ‘ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು - ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ನಾನು ಬರಮಾಡಿದ್ದು ಮೊದಲುಗೊಂಡು ಇಸ್ರಾಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ನನ್ನ ನಾಮದ ನಿವಾಸಕ್ಕೋಸ್ಕರ ಆಲಯಸ್ಥಾನವನ್ನಾಗಿ ಆರಿಸಿಕೊಂಡಿರಲಿಲ್ಲ; ನನ್ನ ಪ್ರಜೆಯಾದ ಇಸ್ರಾಯೇಲ್ಯರ ಪ್ರಭುವಾಗುವದಕ್ಕಾಗಿ ಯಾವನೊಬ್ಬ ಪುರುಷನನ್ನು ಆರಿಸಿಕೊಂಡದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:5
25 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು. ತಡಮಾಡಬೇಡ. ಈಗಲೇ ಸಹಾಯಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ನನ್ನ ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯಮಾಡು” ಎಂದು ಪ್ರಾರ್ಥಿಸಿದೆನು.


‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


“ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಿದ್ದಾನೆ. ಆತನು ದಾವೀದನಿಗೆ,


ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)


ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿದಂದಿನಿಂದ ಈ ದಿವಸದ ತನಕ ನಾನು ಮನೆಯಲ್ಲಿ ವಾಸವಾಗಿರಲಿಲ್ಲ. ನಾನು ಗುಡಾರದಲ್ಲಿಯೇ ಇದ್ದುಕೊಂಡು ಸಂಚರಿಸುತ್ತಿದ್ದೆನು. ಇಸ್ರೇಲರ ನಾಯಕರಾಗುವದಕ್ಕೆ ನಾನು ಕೆಲವರನ್ನು ಆರಿಸಿಕೊಂಡಿದ್ದೇನೆ. ಆ ನಾಯಕರು ನನ್ನ ಜನರಿಗೆ ಕುರುಬರಂತಿದ್ದಾರೆ. ಅವರೊಂದಿಗೆ ನಾನು ಬೇರೆಬೇರೆ ಸ್ಥಳಗಳಿಗೆ ಸಂಚರಿಸುತ್ತಿದ್ದಾಗ ನಾನೆಂದೂ ನನಗೊಂದು ಆಲಯವನ್ನು ದೇವದಾರು ಮರದಿಂದ ಕಟ್ಟಲು ಕೇಳಿಕೊಂಡಿರಲಿಲ್ಲ.’


ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.


ನನ್ನ ನಾಮದ ಮಹತ್ವ ಶಾಶ್ವತವಾಗಿರಬೇಕೆಂದು ನಾನು ಈ ಆಲಯವನ್ನು ಆರಿಸಿಕೊಂಡು ಶುದ್ಧೀಕರಿಸಿದ್ದೇನೆ. ಹೌದು, ನನ್ನ ದೃಷ್ಟಿಯೂ ನನ್ನ ಹೃದಯವೂ ಸದಾಕಾಲ ಈ ಆಲಯದ ಮೇಲೆ ನೆಲೆಸಿರುತ್ತದೆ.


ರಾಜನಾದ ರೆಹಬ್ಬಾಮನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡು ಬಲಗೊಂಡನು. ಅವನು ಪಟ್ಟಕ್ಕೆ ಬಂದಾಗ ನಲವತ್ತೊಂದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಯೆಹೋವನು ತಾನೇ ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಜೆರುಸಲೇಮನ್ನು ಆರಿಸಿಕೊಂಡಿದ್ದನು. ರೆಹಬ್ಬಾಮನ ತಾಯಿಯ ಹೆಸರು ನಯಮಾ. ಆಕೆ ಅಮ್ಮೋನ್ ದೇಶದವಳು.


ಅಬ್ರಹಾಮನ ಸಂತತಿಯವರು ಈ ದೇಶದಲ್ಲಿ ವಾಸವಾಗಿ ನಿನ್ನ ಹೆಸರನ್ನು ಸ್ಥಾಪಿಸಲು ನಿನಗೊಂದು ದೇವಾಲಯವನ್ನು ಕಟ್ಟಿದರು.


ಅವರು, ‘ನಮಗೆ ಖಡ್ಗ, ಕಾಯಿಲೆ, ಬರ, ಶಿಕ್ಷೆಗಳಿಂದ ಸಂಕಷ್ಟ ಉಂಟಾದರೆ ನಾವು ನಿನ್ನ ಮತ್ತು ನಿನ್ನ ಆಲಯದೆದುರು ನಿಂತು ನಿನಗೆ ಮೊರೆಯಿಡುವಾಗ ನೀನು ನಮ್ಮ ಮೊರೆಯನ್ನು ಕೇಳಿ ನಮಗೆ ಸಹಾಯ ಮಾಡುವೆ. ನಿನ್ನ ಹೆಸರು ಈ ಆಲಯದ ಮೇಲಿದೆ’ ಎಂದು ಹೇಳಿದರು.


ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು.


ದೇವಾಲಯದೊಳಗೆ ಮನಸ್ಸೆಯು ವಿಗ್ರಹಗಳಿಗೆ ವೇದಿಕೆಯನ್ನು ಕಟ್ಟಿಸಿದನು. ಯೆಹೋವನು ದೇವಾಲಯದ ವಿಷಯವಾಗಿ, “ನನ್ನ ಹೆಸರು ಜೆರುಸಲೇಮಿನಲ್ಲಿ ನಿರಂತರಕ್ಕೂ ಸ್ಥಾಪಿತವಾಗುವದು” ಎಂದು ಹೇಳಿದ್ದನು.


ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು.


ದಾರಿಯಲ್ಲಿ ಬಾಬಿಲೋನ್ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂದರ್ಶಿಸಬೇಕು. ಅಲ್ಲಿ ವಾಸಿಸುವ ನಿನ್ನ ಜನರಿಂದಲೂ ಯಾಜಕರಿಂದಲೂ ಲೇವಿಯರಿಂದಲೂ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಸ್ವೀಕರಿಸು. ಆ ಕಾಣಿಕೆಗಳು ಜೆರುಸಲೇಮಿನಲ್ಲಿರುವ ದೇವಾಲಯಕ್ಕಾಗಿರುವುದು.


ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು