Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:4 - ಪರಿಶುದ್ದ ಬೈಬಲ್‌

4 ಸೊಲೊಮೋನನ ಮೇಜಿನ ಮೇಲೆ ಇಟ್ಟಿರುವ ಆಹಾರವನ್ನು ನೋಡಿದಳು. ಅವನ ಸೇವಕರು ಮಾಡುವ ಸೇವೆಯ ರೀತಿಯನ್ನು ಪರಿಶೀಲಿಸಿದಳು. ಅವರು ಧರಿಸುವ ಉಡುಪು, ಸಮವಸ್ತ್ರಗಳು, ದೇವಾಲಯಕ್ಕೆ ಹೋಗುವಾಗ ಮಾಡುವ ಮೆರವಣಿಗೆಗಳನ್ನು ಮತ್ತು ಯಜ್ಞಗಳನ್ನು ನೋಡಿದಳು. ಪ್ರತಿಯೊಂದು ವಿಷಯವನ್ನು ಆಕೆ ಗಮನಿಸಿದಾಗ ಅಚ್ಚರಿಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿದ್ದ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೆಲ್ಲಾ ನೋಡಿದಳು. ಅಂತೆಯೇ ಅವನು ಸರ್ವೇಶ್ವರನ ಆಲಯದಲ್ಲಿ ಸಮರ್ಪಿಸುತ್ತಿದ್ದ ದಹನ ಬಲಿಗಳನ್ನೂ ಗಮನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:4
22 ತಿಳಿವುಗಳ ಹೋಲಿಕೆ  

ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.


ಸ್ವಾಮೀ, ನಾನು ನಿಮ್ಮ ಸೇವಕನಾದ ದಾನಿಯೇಲ. ನಾನು ನಿಮ್ಮ ಸಂಗಡ ಹೇಗೆ ಮಾತನಾಡಲಿ. ನನಗೆ ಶಕ್ತಿಯೇ ಇಲ್ಲದಂತಾಗಿದೆ. ಉಸಿರಾಡುವುದೂ ಕಷ್ಟವಾಗಿದೆ” ಎಂದೆ.


ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.


ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”


ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.


“ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.


ನಿನ್ನ ರಕ್ಷಣೆಗಾಗಿ ಕಾಯುತ್ತಾ ಸಾಯುವಂತಾಗಿದ್ದೇನೆ. ನಿನ್ನ ವಾಕ್ಯಗಳಲ್ಲಿಯೇ ಭರವಸವಿಟ್ಟಿದ್ದೇನೆ.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು.


ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.


ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಸೊಲೊಮೋನನು ತನ್ನ ವೈಭವದಿಂದ ಇದ್ದಾಗಲೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಸೌಂದರ್ಯವುಳ್ಳ ಬಟ್ಟೆಗಳನ್ನು ಧರಿಸಲಿಲ್ಲ.


ಶೆಬದ ರಾಣಿಯು ಅವನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ ನೋಡಿದಳು.


ಆಕೆ ಅರಸನಾದ ಸೊಲೊಮೋನನಿಗೆ, “ನನ್ನ ದೇಶದಲ್ಲಿ ನಾನು ನಿನ್ನ ವಿಷಯವಾಗಿ ಕೇಳಿದ ಸಂಗತಿಗಳು, ನಿನ್ನ ಜ್ಞಾನ, ನಿನ್ನ ಕೆಲಸಕಾರ್ಯಗಳು ಎಲ್ಲವೂ ಸತ್ಯವಾಗಿವೆ.


ಸೊಲೊಮೋನನು ರಾಜನಾದ ಹೀರಾಮನಿಗೆ,


“ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದ್ದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು