Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:6 - ಪರಿಶುದ್ದ ಬೈಬಲ್‌

6 ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಧದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ, ನಿಮ್ಮ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:6
11 ತಿಳಿವುಗಳ ಹೋಲಿಕೆ  

ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


ಆಕೆ ಅರಸನಾದ ಸೊಲೊಮೋನನಿಗೆ, “ನನ್ನ ದೇಶದಲ್ಲಿ ನಾನು ನಿನ್ನ ವಿಷಯವಾಗಿ ಕೇಳಿದ ಸಂಗತಿಗಳು, ನಿನ್ನ ಜ್ಞಾನ, ನಿನ್ನ ಕೆಲಸಕಾರ್ಯಗಳು ಎಲ್ಲವೂ ಸತ್ಯವಾಗಿವೆ.


ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಆ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ ಐಶ್ವರ್ಯವೂ ನಿನ್ನಲ್ಲಿದೆ.


ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು.


ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


ನಿನ್ನ ಹೆಂಡತಿಯರೂ ನಿನ್ನ ಅಧಿಕಾರಿಗಳೂ ಧನ್ಯರು. ನಿನ್ನ ಸೇವೆಮಾಡುವ ಇವರು ನಿನ್ನ ಜ್ಞಾನೋಪದೇಶವನ್ನು ಯಾವಾಗಲೂ ಕೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು