Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:16 - ಪರಿಶುದ್ದ ಬೈಬಲ್‌

16 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ತಿಳಿಯಪಡಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶಕ್ತಿಯ ಬಗ್ಗೆಯೂ ಅವರ ಪುನರಾಗಮನದ ಬಗ್ಗೆಯೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಕುತಂತ್ರವಾಗಿ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸಲಿಲ್ಲ. ಆದರೆ ನಾವೇ ಕ್ರಿಸ್ತ ಯೇಸುವಿನ ಮಹತ್ತನ್ನು ಕಣ್ಣಾರೆ ಕಂಡವರಾಗಿ ತಿಳಿಯಪಡಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಮ್ಚ್ಯಾ ಯೆತಲ್ಯಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ತಾಕ್ತಿಚ್ಯಾ ವಿಶಯಾತ್ ಕಳ್ವುಲ್ಯಾಂವ್, ಕಾನಿಯಾಂಚ್ಯಾ ವೈರ್ ಅಮಿ ಹೊಂದುನ್ ನಾ, ಹೆ ಸಗ್ಳ್ಯೆ ಅಮಿ ಜೆಜುಚಿ ಮಹಿಮಾ ಅಮಿ ಡೊಳ್ಯಾನಿ ಬಗಟ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:16
40 ತಿಳಿವುಗಳ ಹೋಲಿಕೆ  

ದೇವರು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿದ್ದನ್ನು ನಾವು ನೋಡಿದ್ದೇವೆ. ನಾವು ಈಗ ಜನರಿಗೆ ಹೇಳುತ್ತಿರುವುದು ಅದನ್ನೇ.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.


ದೇವರ ಸತ್ಯಕ್ಕೆ ಹೊಂದಿಕೆಯಾಗದ ಕ್ಷುಲ್ಲಕ ಕಥೆಗಳನ್ನು ಜನರು ಹೇಳುತ್ತಾರೆ. ಆ ಕಥೆಗಳ ಬೋಧನೆಯನ್ನು ಅನುಸರಿಸಬೇಡ. ದೇವರಿಗೆ ನಿಜವಾದ ಸೇವೆ ಮಾಡಲು ನಿನಗೆ ನೀನೇ ಬೋಧಿಸಿಕೊ.


ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ.


ಆದಾಮನ ಏಳನೆಯ ತಲೆಮಾರಿನವನಾದ ಹನೋಕನು ಈ ಜನರನ್ನು ಕುರಿತು ಹೀಗೆ ಹೇಳಿದ್ದಾನೆ: “ಇಗೋ, ಪ್ರಭುವು ತನ್ನ ಲಕ್ಷಾಂತರ ಪರಿಶುದ್ಧ ದೂತರೊಂದಿಗೆ ಬರುತ್ತಿದ್ದಾನೆ.


ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ನಮ್ಮ ಪ್ರಭುವಾದ ಯೇಸುವಿನ ಹೆಸರಿನಲ್ಲಿ ಒಟ್ಟಾಗಿ ಸೇರಿಬನ್ನಿ. ನಾನು ಆತ್ಮದಲ್ಲಿ ನಿಮ್ಮೊಂದಿಗಿರುವೆನು. ನಮ್ಮ ಪ್ರಭುವಾದ ಯೇಸುವಿನ ಶಕ್ತಿಯೂ ನಿಮ್ಮೊಂದಿಗೆ ಇರುವುದು.


ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.


ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.


ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ಮನುಷ್ಯಕುಮಾರನು ಜನರಿಗೆಲ್ಲ ಕಾಣಿಸುವಂತೆ ಬರುತ್ತಾನೆ. ಮನುಷ್ಯಕುಮಾರನ ಪ್ರತ್ಯಕ್ಷತೆಯು ಆಕಾಶದಲ್ಲಿ ಮಿಂಚು ಹೊಳೆಯುವಂತೆ ಪ್ರಕಾಶಿಸುತ್ತಾ ಲೋಕದ ಎಲ್ಲಾ ಕಡೆಗಳಲ್ಲೂ ಕಾಣಿಸುವುದು.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ.


“ಆಗ ಮನುಷ್ಯಕುಮಾರನು ಅಧಿಕಾರದಿಂದಲೂ ಮಹಾಮಹಿಮೆಯೊಡನೆಯೂ ಮೇಘಗಳಲ್ಲಿ ಬರುವುದನ್ನು ಜನರು ನೋಡುತ್ತಾರೆ.


ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.


ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.


ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ,


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು