Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:9 - ಪರಿಶುದ್ದ ಬೈಬಲ್‌

9 ಆದರೆ ಇವು ಯಾವನಲ್ಲಿ ಇರುವುದಿಲ್ಲವೋ ಅವನು ಸ್ಪಷ್ಟವಾಗಿ ನೋಡಲಾರನು. ಅವನು ಕುರುಡನಾಗಿದ್ದಾನೆ; ತಾನು ಶುದ್ಧನಾದದ್ದನ್ನು ಮರೆತವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್, ಹಿ ಸಗ್ಳಿ ಗುನಾ ನಸಲ್ಲೊ ಅಂದ್ಳೊ ಅನಿ ಕುಡ್ಡೊ ಸಾರ್ಕೊ ಹಾಯ್, ತೆನಿ ತೆಂಚ್ಯಾ ಪಾಟ್ಲ್ಯಾ ಪಾಪಾನಿತ್ನಾ ತೆಂಕಾ ಪವಿತ್ರ್ ಕರುನ್ ಹೊಲಾ ಮನ್ತಲೆ ಇಸರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:9
19 ತಿಳಿವುಗಳ ಹೋಲಿಕೆ  

ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.


ಅದೇ ರೀತಿಯಲ್ಲಿ ನೀವು ಸಹ ನಿಮ್ಮನ್ನು ಪಾಪದ ಶಕ್ತಿಯ ಪಾಲಿಗೆ ಸತ್ತವರೆಂದು ಮತ್ತು ಕ್ರಿಸ್ತ ಯೇಸುವಿನ ಮೂಲಕ ದೇವರಿಗಾಗಿ ಜೀವಿಸುವವರೆಂದು ಪರಿಗಣಿಸಿರಿ.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.


ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.


ಆ ಬಳಿಕ ಯಾಜಕನು ಅದನ್ನು ತಿರುಗಿ ಪರೀಕ್ಷಿಸಬೇಕು. ಬೂಷ್ಟು ಇನ್ನೂ ಹಾಗೆಯೇ ಇರುವಂತೆ ಕಂಡರೆ, ಆಗ ಆ ವಸ್ತು ಅಶುದ್ಧವಾಗಿದೆ. ಅದು ಹರಡಲಿಲ್ಲವಾದರೂ ನೀವು ಬಟ್ಟೆಯನ್ನು ಅಥವಾ ತೊಗಲನ್ನು ಸುಟ್ಟುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು