Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:1 - ಪರಿಶುದ್ದ ಬೈಬಲ್‌

1 ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಲೊಕಾಚ್ಯಾ ಮದ್ದಿ ಝುಟೆ ಪ್ರವಾದಿ ಉಟಲ್ಲ್ಯಾ ಸಾರ್ಕೆ ಝುಟಿ ಶಿಕಾಪಾ ಶಿಕ್ವುತಲೆಬಿ ಉಟ್ತಾತ್ ತೆನಿ ನಾಶ್ ಹೊತಲಿ ಶಿಕಾಪಾ ಹಾನ್ತ್ಯಾತ್, ಅನಿ ಅಪ್ನಾಕುಚ್ ಇಕಾತ್ ಘೆಟಲ್ಲ್ಯಾ ಧನಿಯಾಕುಚ್ ಕಾಯ್ಬಿ ನ್ಹಯ್ ಸಾರ್ಕೆ ಕರ್ತಾತ್, ಅನಿ ಅಸೆಚ್ ತೆನಿ ಅಪ್ನಾ ವರ್ತಿ ನಾಶ್ ಹಾನುನ್ ಘೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:1
73 ತಿಳಿವುಗಳ ಹೋಲಿಕೆ  

“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.


ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.


(ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.)


ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ಯಾವನಾದರೂ ಭೇದ ಹುಟ್ಟಿಸುತ್ತಿದ್ದರೆ, ಅವನಿಗೆ ಎಚ್ಚರಿಕೆ ನೀಡು. ಅವನಿನ್ನೂ ಮುಂದುವರಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡು. ಆದರೂ ಅವನು ಕೇಳದೆಹೋದರೆ ಅವನ ಸಹವಾಸವನ್ನು ತೊರೆದುಬಿಡು.


ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.


ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.


ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,


ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


“ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ನಿಮ್ಮನ್ನು ಕ್ರಯಕ್ಕೆ ಕೊಂಡುಕೊಳ್ಳಲಾಗಿದೆ. ಆದ್ದರಿಂದ ನೀವು ಮನುಷ್ಯರ ಗುಲಾಮರಾಗಬೇಡಿ.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ದೇವರೂ ಪ್ರವಾದಿಯೂ ಕಾವಲುಗಾರರಂತೆ ಎಫ್ರಾಯೀಮನ್ನು ಕಾಪಾಡುತ್ತಿದ್ದಾರೆ. ಆದರೆ ದಾರಿಯಲ್ಲಿ ಅನೇಕ ಉರುಲುಗಳಿವೆ. ಜನರು ಪ್ರವಾದಿಯನ್ನು ಹಗೆ ಮಾಡುತ್ತಾರೆ. ದೇವರ ಆಲಯದಲ್ಲಿಯೂ ಅವನನ್ನು ಹಗೆ ಮಾಡುತ್ತಾರೆ.


ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಮುಂದೆ ತೆರೆದ ಬಾಗಿಲನ್ನು ಇಟ್ಟಿದ್ದೇನೆ. ಅದನ್ನು ಯಾರೂ ಮುಚ್ಚಲಾರರು. ನೀನು ದುರ್ಬಲನೆಂಬುದು ನನಗೆ ತಿಳಿದಿದೆ. ಆದರೆ ನೀನು ನನ್ನ ಬೋಧನೆಯನ್ನು ಅನುಸರಿಸಿದೆ. ನನ್ನ ಹೆಸರನ್ನು ಹೇಳಲು ನೀನು ಹಿಂಜರಿಯಲಿಲ್ಲ.


ಆದರೆ ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ದೇವದೂತರ ಮುಂದೆ ಅವನನ್ನು ನನ್ನವನಲ್ಲವೆಂದು ಹೇಳುವೆನು.


ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.


ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.


ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು