Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:10 - ಪರಿಶುದ್ದ ಬೈಬಲ್‌

10 ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತಿ ಝುಟಿ ಶಿಕಾಪಾ ಶಿಕ್ವುತಲೆ ಕೊನಾಕ್ಬಿ ಭಿಂಯ್ ನಸ್ತಾನಾ ಅಪ್ನಾಚ್ಯಾ ಮನಾಕ್ ಯೆತಾ ತಸೆ ಆಂಗಾಕ್ ಸಮಂದ್ ಪಡಲ್ಲೆ ಹೊವ್ನ್ ಹಾತ್, ಅನಿ ಮಹಿಮೆಚ್ಯಾ ಪದ್ವಿ ವರ್ತಿ ಅನಿ ಎಕ್ಲ್ಯಾಕ್ನಿ ಮಾನ್ ದಿವ್ನಸ್ತಾನಾ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:10
38 ತಿಳಿವುಗಳ ಹೋಲಿಕೆ  

ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.


ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.


ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು.


ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.


ನಾವು ಪ್ರಪಂಚದಲ್ಲಿ ಜೀವಿಸುತ್ತಿದ್ದೇವೆ. ಆದರೆ ಪ್ರಪಂಚದವರು ಹೊಡೆದಾಡುವ ರೀತಿಯಲ್ಲಿ ನಾವು ಹೊಡೆದಾಡುವುದಿಲ್ಲ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?


“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.


ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.


ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.


ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.


“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.


ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.


ಅವರಿಗೆ ನಾಚಿಕೆಯೇ ಇಲ್ಲ. ಅವರು ತಮ್ಮ ಜೀವಿತಗಳನ್ನು ದುಷ್ಕೃತ್ಯಗಳಿಗೆ ಉಪಯೋಗಿಸುತ್ತಾರೆ; ಎಲ್ಲಾ ಬಗೆಯ ಕೆಟ್ಟಕಾರ್ಯಗಳನ್ನು ಇನ್ನೂ ಹೆಚ್ಚೆಚ್ಚಾಗಿ ಮಾಡಲು ತವಕಪಡುತ್ತಾರೆ.


ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;


ಅದು ಆ ವ್ಯಕ್ತಿಯ ಬಳಿಗೆ ಹಿಂತಿರುಗಿ ಬಂದಾಗ, ಆ ಮನೆಯನ್ನು (ವ್ಯಕ್ತಿ) ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು