Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:12 - ಪರಿಶುದ್ದ ಬೈಬಲ್‌

12 ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ಆ ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಧನಿಯಾಚ್ಯಾ ದಿಸಾಕ್ ರಾಕುನ್ಗೆತ್ ಬಗುನ್ಗೆತ್ ರ್‍ಹಾವ್ಚೆ, ತೊ ದಿಸ್ ಯೆಲ್ಲ್ಯಾ ತನ್ನಾ ಮಳಬ್ ಆಗಿನ್ ನಾಶ್ ಹೊತಾ, ಅನಿ ಮಳ್ಬಾತ್ ಹೊತ್ತೆ ಹರ್ ಎಕ್ ರಕ್ಕಾ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:12
17 ತಿಳಿವುಗಳ ಹೋಲಿಕೆ  

ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.


ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು.


ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.


ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.


ಭೂಕಂಪಗಳಾಗುವವು. ಭೂಮಿಯು ಸೀಳಿಹೋಗುವದು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಆ ಜನರು, “ಆತನು ಮತ್ತೆ ಬರುವುದಾಗಿ ವಾಗ್ದಾನ ಮಾಡಿದ್ದನು. ಆತನು ಎಲ್ಲಿದ್ದಾನೆ? ನಮ್ಮ ಪಿತೃಗಳು ಸತ್ತುಹೋದರು. ಆದರೆ ಈ ಲೋಕವು ಆದಿಯಿಂದಲೂ ಇದ್ದ ರೀತಿಯಲ್ಲಿಯೇ ಇದೆ” ಎಂದು ಹೇಳುವರು.


ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು