Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:14 - ಪರಿಶುದ್ದ ಬೈಬಲ್‌

14 ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಮಜ್ಯಾ ಪ್ರಿತಿಚ್ಯಾನು ಹ್ಯಾ ಘಡಿತ್ತಾಚಿ ತುಮಿ ವಾಟ್ ಬಗುನ್ಗೆತ್ ಹಾಸಿ, ಅಸೆ ರಾತಾನಾ ಸಮಾದಾನಾನ್ ಬರ್‍ಯಾ ಭುತ್ತುರ್‍ಲ್ಯಾ ಮನಾಚಿ ಲೊಕಾ ಹೊವ್ನ್ ದೆವಾಕ್ ಭೆಟುಕ್ ಪವಿತ್ರ್ ಅನಿ ಚುಕ್ ನಸಲ್ಲೆ ಜಿವನ್ ಕರುಕ್ ಕಟ್ಪಟ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:14
19 ತಿಳಿವುಗಳ ಹೋಲಿಕೆ  

ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ.


ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.


ಒಳಿತುಕೆಡಕುಗಳಿಗಿರುವ ವ್ಯತ್ಯಾಸವನ್ನು ಅರಿತುಕೊಂಡು ಒಳ್ಳೆಯದನ್ನೇ ಆರಿಸಿಕೊಳ್ಳುವಂಥವರಾಗಬೇಕು; ಕ್ರಿಸ್ತನ ಬರುವಿಕೆಯಲ್ಲಿ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಕ್ರಿಸ್ತನಲ್ಲಿ ಈ ನಿರೀಕ್ಷೆಯನ್ನು ಹೊಂದಿರುವ ಪ್ರತಿಯೊಬ್ಬನೂ ಕ್ರಿಸ್ತನು ಶುದ್ಧನಾಗಿರುವಂತೆ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಯಜಮಾನನು ಬಂದಾಗ ಅವನಿಗೆ ಬಹಳ ಸಂತೋಷವಾಗುವುದು.


“ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ನಾವಾದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು.


“‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ.


ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ನನ್ನ ಸ್ನೇಹಿತರೇ, ನಾನು ನಿಮಗೆ ಬರೆಯುತ್ತಿರುವ ಎರಡನೆ ಪತ್ರವಿದು. ನಿಮ್ಮ ಯಥಾರ್ಥವಾದ ಮನಸ್ಸು ಮತ್ತೆ ನೆನಪು ಮಾಡಿಕೊಳ್ಳಲಿ ಎಂದು ನಾನು ಈ ಎರಡು ಪತ್ರಗಳನ್ನು ಬರೆದಿದ್ದೇನೆ.


ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.


“ಆಗ ಕನ್ನಿಕೆಯರೆಲ್ಲ ಎಚ್ಚರಗೊಂಡು ತಮ್ಮ ದೀಪಾರತಿಗಳನ್ನು ಸಿದ್ಧಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು