Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:15 - ಪರಿಶುದ್ದ ಬೈಬಲ್‌

15 ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಧನಿಯಾನ್ ಎವ್ಡೆ ಲೈ ಎಳ್ ಅಮ್ಕಾ ಸೊಸುನ್ ಘೆಟಲ್ಲೆ ಅಮ್ಚ್ಯಾ ಸುಟ್ಕೆಸಾಟ್ನಿ ಎಕ್ ಅವ್ಕಾಸ್ ಮನುನ್ ಘೆವಾ, ಅಮ್ಚ್ಯಾ ಪ್ರಿತಿಚ್ಯಾ ಭಾವ್ ಪಾವ್ಲುನ್ಬಿ ಅಪ್ನಾಕ್ ಗಾವಲ್ಲ್ಯಾ ಶಾನ್ಪಾನಾಚ್ಯಾ ಪರ್ಕಾರ್ ಹೆಚ್ಯಾ ವಿಶಯಾತ್ ಚಿಟ್ ಲಿವ್ನ್ ಸಾಂಗಟಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:15
27 ತಿಳಿವುಗಳ ಹೋಲಿಕೆ  

ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.


ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.


ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


ಆದ್ದರಿಂದ ನಾವೆಲ್ಲರೂ ಕೆಲವರನ್ನು ಸರ್ವಾನುಮತದಿಂದ ಆರಿಸಿ ನಿಮ್ಮ ಬಳಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಿಯ ಸಹೋದರರಾದ ಬಾರ್ನಬ ಮತ್ತು ಪೌಲರೊಂದಿಗೆ ಅವರು ಬರುತ್ತಿದ್ದಾರೆ.


ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.


ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.


ದೇವರು ತನ್ನ ರಹಸ್ಯವಾದ ಯೋಜನೆಯನ್ನು ನನಗೆ ತಿಳಿಸಿದನು ಮತ್ತು ತೋರಿಸಿದನು. ಇದರ ಬಗ್ಗೆ ನಾನು ಆಗಲೇ ನಿಮಗೆ ಸ್ವಲ್ಪ ಬರೆದಿದ್ದೇನೆ.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.


ಯೆಹೋವನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿ, ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದಾನೆ.


ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:


ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ಪರಿಶುದ್ಧರಾದ ಪ್ರವಾದಿಗಳು ಹಿಂದಿನಕಾಲದಲ್ಲಿ ಹೇಳಿದ್ದನ್ನು ನೀವು ಜ್ಞಾಪಿಸಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ. ನಮ್ಮ ರಕ್ಷಕನಾದ ಪ್ರಭುವು ನಿಮ್ಮ ಅಪೊಸ್ತಲರ ಮೂಲಕ ನೀಡಿದ ಆಜ್ಞೆಯನ್ನು ನೆನಪು ಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು