Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:1 - ಪರಿಶುದ್ದ ಬೈಬಲ್‌

1 ಸಭಾಹಿರಿಯನು, ದೇವರಿಂದ ಆಯ್ಕೆಯಾದ ಅಮ್ಮನವರಿಗೆ ಮತ್ತು ಆಕೆಯ ಮಕ್ಕಳಿಗೆ ಬರೆಯುವ ಪತ್ರ. ನಾನು ನಿಮ್ಮೆಲ್ಲರನ್ನು ಸತ್ಯದಲ್ಲಿ ಪ್ರೀತಿಸುತ್ತೇನೆ. ಸತ್ಯವನ್ನು ತಿಳಿದಿರುವ ಜನರೆಲ್ಲರೂ ಸಹ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1-2 ಸಭೆಯ ಹಿರಿಯನು ದೇವರಾದುಕೊಂಡವರಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವದೇನಂದರೆ - ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲವೂ ನಮ್ಮೊಂದಿಗಿರುವಂಥ ಸತ್ಯದ ನಿವಿುತ್ತ ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜಾನ್ತ್ಯಾನ್, ಪ್ರಿತಿಚ್ಯಾ ಬಾಯಿಕ್ ಅನಿ ತಿಚ್ಯಾ ಪೊರಾಕ್ನಿ ಲಿವ್ತಲಿ ಚಿಟ್, ಮಿಯಾ ತುಮ್ಚೊ ಪ್ರೆಮ್ ಕರ್ತಾ ಅನಿ ಮಿಯಾ ಎಕ್ಲೊಚ್ ನ್ಹಯ್, ಖರೆಪಾನ್ ಗೊತ್ತ್ ಹೊತ್ತಿ, ಎಚುನ್ ಹೊಲ್ಲೆ ಸಗ್ಳೆ ಜಾನಾ ತುಮ್ಚೊ ಪ್ರೆಮ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:1
25 ತಿಳಿವುಗಳ ಹೋಲಿಕೆ  

ನನ್ನ ಮಕ್ಕಳೇ, ನಮ್ಮ ಪ್ರೀತಿಯು ಕೇವಲ ಶಬ್ಧಗಳಲ್ಲಿ ಮತ್ತು ಮಾತಿನಲ್ಲಿ ಇರಬಾರದು. ನಮ್ಮ ಪ್ರೀತಿಯು ನಿಜವಾದ ಪ್ರೀತಿಯಾಗಿರಬೇಕು. ನಾವು ಮಾಡುವ ಕಾರ್ಯಗಳಲ್ಲಿಯೇ ನಮ್ಮ ಪ್ರೀತಿಯನ್ನು ತೋರ್ಪಡಿಸಬೇಕು.


ಎಲ್ಲಾ ಜನರು ರಕ್ಷಿಸಲ್ಪಡಬೇಕೆಂದು, ಸತ್ಯವನ್ನು ತಿಳಿದು ಕೊಳ್ಳಬೇಕೆಂದು ದೇವರು ಬಯಸುತ್ತಾನೆ.


ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ಪ್ರಿಯ ಅಮ್ಮನವರೇ, ಈಗ ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ, ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಹೊಸ ಆಜ್ಞೆಯಾಗಿರದೆ ಮೊದಲಿನಿಂದಲೂ ಇದ್ದ ಆಜ್ಞೆಯಾಗಿದೆ.


ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.


ದೇವರಿಂದ ಆಯ್ಕೆಗೊಂಡವಳಾದ ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ತಿಳಿಸಿದ್ದಾರೆ.


ನಾನು ನಿಮಗೆ ಏಕೆ ಬರೆಯಬೇಕು? ನೀವು ಸತ್ಯವನ್ನು ತಿಳಿದಿಲ್ಲವೆಂದು ನಾನು ಬರೆಯಬೇಕೇ? ಇಲ್ಲ! ನೀವು ಸತ್ಯವನ್ನು ತಿಳಿದಿರುವುದರಿಂದ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಸತ್ಯದಿಂದ ಯಾವ ಸುಳ್ಳೂ ಬರುವುದಿಲ್ಲ ಎಂಬುದು ನಿಮಗೆ ತಿಳಿದಿದೆ.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.


ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು?


ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.


ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.


ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು.


ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.


ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.


ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.


ರೂಫನಿಗೆ ನನ್ನ ವಂದನೆ ತಿಳಿಸಿರಿ. ಅವನು ಪ್ರಭುವಿನಲ್ಲಿ ವಿಶೇಷವಾದ ವ್ಯಕ್ತಿ. ಅವನ ತಾಯಿಗೂ ನನ್ನ ವಂದನೆ ತಿಳಿಸಿರಿ. ಆಕೆ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡಳು.


ಬಾಬಿಲೋನಿನಲ್ಲಿರುವ ಸಭೆಯವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ನಿಮ್ಮನ್ನು ಆರಿಸಿಕೊಂಡಂತೆಯೇ ಆ ಜನರನ್ನೂ ಆರಿಸಿಕೊಳ್ಳಲಾಗಿದೆ. ಕ್ರಿಸ್ತನಲ್ಲಿ ನನ್ನ ಮಗನಾದ ಮಾರ್ಕನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ.


ಸಭಾಹಿರಿಯನು, ತಾನು ಸತ್ಯವಾಗಿಯೂ ಪ್ರೀತಿಸುವ, ತನ್ನ ಪ್ರಿಯ ಸ್ನೇಹಿತನಾದ ಗಾಯನಿಗೆ ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು