Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:7 - ಪರಿಶುದ್ದ ಬೈಬಲ್‌

7 ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ಜೆಜು ಕ್ರಿಸ್ತ್ ಮಾನುಸ್ ಹೊವ್ನ್ ಯೆಲೊ ಮನ್ತಲೆ ಮಾನಿನಸ್ತಾನಾ, ಲೊಕಾಕ್ನಿ ಪಸ್ವುತಲಿ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಹೊತ್ತಿ ಲೊಕಾ ಹ್ಯಾ ಜಗಾತ್ ಪಗಳ್ಳ್ಯಾತ್. ಹೆನಿಚ್ ಪಸ್ವುತಲೆ ಅನಿ ಕ್ರಿಸ್ತಾಕ್ ವಿರೊಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:7
8 ತಿಳಿವುಗಳ ಹೋಲಿಕೆ  

ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು