Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:10 - ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ಅವನನ್ನು ಕೊಂದೆನು. ಅವನು ಮತ್ತೆ ಜೀವದಿಂದ ಉಳಿಯಲಾರದಷ್ಟು ಗಾಯಗೊಂಡಿದ್ದಾನೆಂಬುದು ನನಗೆ ತಿಳಿದಿತ್ತು. ನಂತರ ನಾನು ಅವನ ತಲೆಯಿಂದ ಕಿರೀಟವನ್ನೂ ತೋಳಿನ ಕವಚವನ್ನೂ ತೆಗೆದುಕೊಂಡೆನು. ನನ್ನ ಒಡೆಯನೇ, ನಾನು ಆ ಕಿರೀಟವನ್ನು ಮತ್ತು ತೋಳಿನ ಕವಚವನ್ನು ನಿನ್ನ ಬಳಿಗೆ ತಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಕೆಳಕ್ಕೆ ಬಿದ್ದುಬಿಟ್ಟರೆ ಬದುಕಲಾರರೆಂದು ನೆನೆಸಿ ನಾನು ಅವರನ್ನು ಸಮೀಪಿಸಿ ಕೊಂದುಹಾಕಿದೆ. ಅವರ ತಲೆಯ ಮೇಲಿನ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ನನ್ನ ಒಡೆಯರಾದ ತಮ್ಮ ಬಳಿಗೆ ತಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಹತ್ತಿರ ಹೋಗಿ ಅವನು ಬಿದ್ದು ಬಿಟ್ಟರೆ ಬದುಕಲಾರನೆಂದು ನೆನಸಿ ಅವನನ್ನು ಕೊಂದುಹಾಕಿ ಅವನ ತಲೆಯ ಮೇಲಣ ಕಿರೀಟವನ್ನೂ ರಟ್ಟೆಯಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:10
10 ತಿಳಿವುಗಳ ಹೋಲಿಕೆ  

ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ “ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.


ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.


ದಾವೀದನು ಅವರ ರಾಜನ ತಲೆಯ ಮೇಲಿದ್ದ ಕಿರೀಟವನ್ನು ತೆಗೆದುಕೊಂಡನು. ಆ ಕೀರಿಟವು ಚಿನ್ನದ್ದೂ ಎಪ್ಪತ್ತೈದು ಪೌಂಡುಗಳಷ್ಟು ಭಾರವುಳ್ಳದ್ದೂ ಆಗಿತ್ತು. ಆ ಕಿರೀಟದಲ್ಲಿ ಬೆಲೆಬಾಳುವ ರತ್ನಗಳಿದ್ದವು. ಅವರು ಆ ಕೀರಿಟವನ್ನು ದಾವೀದನ ತಲೆಯ ಮೇಲೆ ಇಟ್ಟರು. ದಾವೀದನು ಆ ನಗರದಿಂದ ಅನೇಕ ಬೆಲೆಬಾಳುವ ವಸ್ತುಗಳನ್ನು ತಂದನು.


ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.


ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.


ಸೌಲನು ನನಗೆ, ‘ದಯವಿಟ್ಟು ನನ್ನನ್ನು ಕೊಂದುಬಿಡು. ನಾನು ಬಹು ಸಂಕಟದಲ್ಲಿದ್ದೇನೆ. ನಾನು ಈಗಾಗಲೇ ಸತ್ತವನಂತಿದ್ದೇನೆ’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು