Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:21 - ಪರಿಶುದ್ದ ಬೈಬಲ್‌

21 “ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗಿಲ್ಬೋವಗುಡ್ಡಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ; ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:21
14 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು.


ಜನರಾದರೋ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಯಾಜಕರೇ, ಯೆಹೋವನ ಸೇವಕರೇ, ಗೋಳಾಡಿರಿ. ಯಾಕೆಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ ಮತ್ತು ಧಾನ್ಯಾರ್ಪಣೆ ಇರದು.


ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಮರುದಿವಸ ಫಿಲಿಷ್ಟಿಯರು ಹೆಣಗಳ ಮೇಲಿರುವ ಬೆಲೆಬಾಳುವ ವಸ್ತುಗಳನ್ನು ದೋಚಲು ಬಂದರು. ಆಗ ಅವರಿಗೆ ಗಿಲ್ಬೋವ ಬೆಟ್ಟದ ಮೇಲೆ ಸೌಲ ಮತ್ತು ಅವನ ಗಂಡುಮಕ್ಕಳ ಶರೀರಗಳು ದೊರಕಿದವು.


ಫಿಲಿಷ್ಟಿಯರು ಇಸ್ರೇಲರ ವಿರೋಧವಾಗಿ ಕಾದಾಡಿದರು. ಆದರೆ ಇಸ್ರೇಲರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಬೇಕಾಯಿತು. ಇಸ್ರೇಲರಲ್ಲಿ ಬಹಳ ಮಂದಿ ಗಿಲ್ಬೋವ ಬೆಟ್ಟದ ಮೇಲೆ ಹತರಾದರು.


“ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.


ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ. ಆ ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ.


ಮಾರನೆಯ ದಿನ, ಸತ್ತದೇಹಗಳಿಂದ ವಸ್ತುಗಳನ್ನು ದೋಚಲು ಫಿಲಿಷ್ಟಿಯರು ಬಂದರು. ಸೌಲನು ಮತ್ತು ಅವನ ಮೂರು ಜನ ಮಕ್ಕಳು ಗಿಲ್ಬೋವ ಶಿಖರದಲ್ಲಿ ಸತ್ತಿರುವುದನ್ನು ಅವರು ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು