Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:4 - ಪರಿಶುದ್ದ ಬೈಬಲ್‌

4 ದಾವೀದನು ಅವನನ್ನು, “ಯುದ್ಧದಲ್ಲಿ ಯಾರು ಗೆದ್ದರು, ನನಗೆ ದಯವಿಟ್ಟು ತಿಳಿಸು?” ಎಂದು ಕೇಳಿದನು. ಅವನು, “ಇಸ್ರೇಲ್ ಜನರು ಯುದ್ಧರಂಗದಿಂದ ಓಡಿಹೋದರು. ಯುದ್ಧದಲ್ಲಿ ಅನೇಕರು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ದಾವೀದನು, “ಏನಾಯಿತೆಂದು ತಿಳಿಸು,” ಎನ್ನಲು ಆ ವ್ಯಕ್ತಿ, “ಇಸ್ರಯೇಲರು ರಣರಂಗದಿಂದ ಓಡಿಹೋದರು; ಅನೇಕರು ಮಡಿದರು. ಸೌಲನೂ ಅವನ ಮಗ ಯೋನಾತಾನನೂ ಮರಣಹೊಂದಿದರು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ದಾವೀದನು - ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು ಅನ್ನಲು ಆ ಮನುಷ್ಯನು - ಇಸ್ರಾಯೇಲ್ಯರು ರಣರಂಗದಿಂದ ಓಡಿಹೋದರು. ಅನೇಕರು ಮಡಿದರು. ಸೌಲನೂ ಅವನ ಮಗನಾದ ಯೋನಾತಾನನೂ ಮೃತಿ ಹೊಂದಿದರು ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು. ಅವನು, “ಜನರು ಯುದ್ಧದಿಂದ ಓಡಿಹೋದರು. ಜನರಲ್ಲಿ ಅನೇಕರು ಸತ್ತರು. ಸೌಲನೂ, ಅವನ ಮಗ ಯೋನಾತಾನನೂ ಸತ್ತರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:4
6 ತಿಳಿವುಗಳ ಹೋಲಿಕೆ  

ಆ ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ಈ ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು.


ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಾನು ಇಸ್ರೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ” ಎಂದು ಹೇಳಿದನು.


ದಾವೀದನು ಆ ಯುವಕನಿಗೆ, “ಸೌಲನು ಮತ್ತು ಅವನ ಮಗನಾದ ಯೋನಾತಾನನು ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಕೇಳಿದನು.


ಆದರೆ ಒಮ್ಮೆ ಒಬ್ಬ ವ್ಯಕ್ತಿಯು ತಾನು ಶುಭ ಸುದ್ದಿಯನ್ನು ನನಗೆ ತರುತ್ತಿದ್ದೇನೆಂದು ಯೋಚಿಸಿದನು. ಅವನು, ‘ನೋಡು, ಸೌಲನು ಸತ್ತನು’ ಎಂದು ನನಗೆ ಹೇಳಿದನು. ಈ ಸುದ್ದಿಯನ್ನು ನನಗೆ ತಿಳಿಸಿದ್ದರಿಂದ ನಾನು ಅವನಿಗೆ ಕೊಡುಗೆಗಳನ್ನು ಕೊಡಬಹುದೆಂದು ಅವನು ಭಾವಿಸಿದನು. ಆದರೆ ನಾನು ಅವನನ್ನು ಚಿಕ್ಲಗಿನಲ್ಲಿ ಕೊಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು