Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:18 - ಪರಿಶುದ್ದ ಬೈಬಲ್‌

18 ಆದರೆ ದಾವೀದನು ಅರಾಮ್ಯರನ್ನು ಸೋಲಿಸಿದನು. ಅರಾಮ್ಯರು ಇಸ್ರೇಲರನ್ನು ಬಿಟ್ಟು ಓಡಿಹೋದರು. ದಾವೀದನು ಅರಾಮ್ಯರ ಏಳು ನೂರು ಮಂದಿ ರಥದ ಸಾರಥಿಯರನ್ನೂ ನಲವತ್ತು ಸಾವಿರ ಮಂದಿ ರಾಹುತರನ್ನೂ ಕೊಂದುಹಾಕಿದನು. ಅರಾಮ್ಯರ ಸೇನಾಪತಿಯಾದ ಶೋಬಕನನ್ನು ಸಹ ದಾವೀದನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು; ದಾವೀದನು ಅರಾಮ್ಯರ ಏಳುನೂರು ರಥಗಳನ್ನು ಹಾಳುಮಾಡಿ ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಹತಿಸಿಬಿಟ್ಟನು; ಸೇನಾಪತಿಯಾದ ಶೋಬಕನು ಗಾಯಹೊಂದಿ ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:18
10 ತಿಳಿವುಗಳ ಹೋಲಿಕೆ  

ಅರಾಮ್ಯರು ಇಸ್ರೇಲರ ಎದುರು ನಿಲ್ಲಲಾರದೆ ಬೆನ್ನುಹಾಕಿ ಓಡಿದರು. ಆ ದಿವಸ ದಾವೀದನೂ ಅವನ ಸೈನಿಕರೂ ಅರಾಮ್ಯರ ಏಳು ಸಾವಿರ ಮಂದಿ ರಾಹುತರನ್ನೂ ನಲವತ್ತು ಸಾವಿರ ಮಂದಿ ಕಾಲಾಳುಗಳನ್ನೂ ಕೊಂದರು. ಇವರಲ್ಲಿ ಅರಾಮ್ಯರ ಸೇನಾಪತಿಯಾದ ಶೋಫಕನೂ ಕೊಲ್ಲಲ್ಪಟ್ಟನು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ನಾನು ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಏಳಲಾರದಂತೆ ಮಾಡುವೆನು; ನನ್ನ ಶತ್ರುಗಳು ನನ್ನ ಪಾದಗಳ ಕೆಳಗೇ ಇರುವರು.


ಹದದೆಜೆರನಿಂದ ಒಂದು ಸಾವಿರ ರಥಗಳನ್ನೂ ಒಂದು ಸಾವಿರದ ಏಳುನೂರು ಅಶ್ವಪಡೆಗಳನ್ನೂ ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ಒಂದು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.


ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದುಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.


ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನೀನು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.


ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.


ಈ ವಿಷಯವು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಇಸ್ರೇಲರೆಲ್ಲರನ್ನೂ ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಹೇಲಾಮಿಗೆ ಹೋದನು. ಅಲ್ಲಿ ಅರಾಮ್ಯರು ಯುದ್ಧಕ್ಕೆ ಸಿದ್ಧರಾಗಿ ಆಕ್ರಮಣ ಮಾಡಿದರು.


ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಆ ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.


ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು