Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:15 - ಪರಿಶುದ್ದ ಬೈಬಲ್‌

15 ನಾತಾನನು ಮನೆಗೆ ಹೋದನು. ದಾವೀದನಿಗೆ ಊರೀಯನ ಹೆಂಡತಿಯಲ್ಲಿ ಹುಟ್ಟಿದ ಗಂಡುಮಗುವಿಗೆ ಯೆಹೋವನು ಬಹಳ ಕಾಯಿಲೆಯನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಸರ್ವೇಶ್ವರನ ಶಿಕ್ಷೆಯಿಂದಾಗಿ ಬಹು ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗುವು ಯೆಹೋವನ ಪೆಟ್ಟಿನಿಂದ ಬಹುವಾಗಿ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಂತರ ನಾತಾನನು ತನ್ನ ಮನೆಗೆ ಹೋದನು. ಯೆಹೋವ ದೇವರು, ಊರೀಯನ ಹೆಂಡತಿಯು ದಾವೀದನಿಗೆ ಹೆತ್ತ ಕೂಸನ್ನು ಬಾಧಿಸಲು, ಅದು ಬಹಳ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:15
9 ತಿಳಿವುಗಳ ಹೋಲಿಕೆ  

ಹತ್ತು ದಿನಗಳಾದ ಮೇಲೆ, ಯೆಹೋವನು ನಾಬಾಲನಿಗೆ ಸಾವನ್ನು ಬರಮಾಡಿದನು.


ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ಅಬೀಯನಿರುವಷ್ಟು ಕಾಲ ಯಾರೊಬ್ಬಾಮನು ಮತ್ತೆ ಬಲಗೊಳ್ಳಲೇ ಇಲ್ಲ. ಯೆಹೋವನು ಯಾರೊಬ್ಬಾಮನನ್ನು ಸಾಯಿಸಿದನು.


ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.


ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.


ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು