Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:16 - ಪರಿಶುದ್ದ ಬೈಬಲ್‌

16 ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ ಉಪವಾಸಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿಕಳೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:16
17 ತಿಳಿವುಗಳ ಹೋಲಿಕೆ  

ರಾಜನಾದ ದಾವೀದನು ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ದಾವೀದನ ಸುತ್ತಲೂ ನಿಂತಿದ್ದ ಅವನ ಸೇವಕರೂ ತಮ್ಮತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಮೂರು ದಿನಗಳವರೆಗೆ ಸೌಲನಿಗೆ ಏನೂ ಕಾಣಲಿಲ್ಲ. ಅವನು ಊಟವನ್ನೂ ಮಾಡಲಿಲ್ಲ ನೀರನ್ನೂ ಕುಡಿಯಲಿಲ್ಲ.


ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ನಾನು ಅಳುತ್ತಾ ಉಪವಾಸಮಾಡುವೆನು. ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.


ದಾವೀದನು, “ಮಗು ಜೀವದಿಂದ ಇರುವಾಗ ನಾನು ಊಟಮಾಡದೆ ಗೋಳಾಡಿದೆ, ಏಕೆಂದರೆ ‘ಒಂದುವೇಳೆ ಯೆಹೋವನು ನನ್ನ ಬಗ್ಗೆ ಅನುಕಂಪವನ್ನು ತೋರಿ ಮಗುವನ್ನು ಬದುಕಿಸಬಹುದು’ ಎಂದು ನಾನು ಯೋಚಿಸಿಕೊಂಡಿದ್ದೆ.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ನಾತಾನನು ಮನೆಗೆ ಹೋದನು. ದಾವೀದನಿಗೆ ಊರೀಯನ ಹೆಂಡತಿಯಲ್ಲಿ ಹುಟ್ಟಿದ ಗಂಡುಮಗುವಿಗೆ ಯೆಹೋವನು ಬಹಳ ಕಾಯಿಲೆಯನ್ನು ಬರಮಾಡಿದನು.


ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ.


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು