Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:22 - ಪರಿಶುದ್ದ ಬೈಬಲ್‌

22 ದಾವೀದನು, “ಮಗು ಜೀವದಿಂದ ಇರುವಾಗ ನಾನು ಊಟಮಾಡದೆ ಗೋಳಾಡಿದೆ, ಏಕೆಂದರೆ ‘ಒಂದುವೇಳೆ ಯೆಹೋವನು ನನ್ನ ಬಗ್ಗೆ ಅನುಕಂಪವನ್ನು ತೋರಿ ಮಗುವನ್ನು ಬದುಕಿಸಬಹುದು’ ಎಂದು ನಾನು ಯೋಚಿಸಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದಾವೀದನು ಅವರಿಗೆ - ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸಮಾಡಿದೆನು, ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:22
10 ತಿಳಿವುಗಳ ಹೋಲಿಕೆ  

“ಹಿಜ್ಕೀಯನ ಬಳಿಗೆ ಹೋಗಿ ಹೇಳು, ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವುದೇನೆಂದರೆ: ‘ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ.


ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟಮಾಡಲಿಲ್ಲ. ನೀನು ಗೋಳಾಡಿದೆ, ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು