Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:31 - ಪರಿಶುದ್ದ ಬೈಬಲ್‌

31 ದಾವೀದನು ರಬ್ಬ ನಗರದ ಜನರನ್ನು ಹೊರದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲಿ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಮಾಡುವದಕ್ಕೂ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇವಿುಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:31
10 ತಿಳಿವುಗಳ ಹೋಲಿಕೆ  

ದಾವೀದನು ರಬ್ಬದ ಜನರನ್ನು ಸೆರೆಹಿಡಿದುಕೊಂಡು ಬಂದು ಅವರನ್ನು ಮರಕಡಿಯುವುದಕ್ಕೂ ಕೊಡಲಿ ಮತ್ತು ಹಾರೆಗಳಿಂದ ಕೆಲಸ ಮಾಡುವದಕ್ಕೂ ನೇಮಿಸಿದನು. ಇದೇ ಪ್ರಕಾರ ದಾವೀದನು ಅಮ್ಮೋನಿಯರ ಎಲ್ಲಾ ಪಟ್ಟಣಗಳಲ್ಲಿಯೂ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂತಿರುಗಿ ಬಂದನು.


ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ಅದರ ಅರಸನ ಕಿರೀಟವನ್ನು ದಾವೀದನು ತೆಗೆದುಕೊಂಡನು. ಅದು ಎಪ್ಪತ್ತೈದು ಪೌಂಡು ಭಾರವುಳ್ಳದ್ದಾಗಿತ್ತು ಮತ್ತು ಅಮೂಲ್ಯವಾದ ರತ್ನಗಳಿಂದ ಮಾಡಿದ್ದಾಗಿತ್ತು. ಆ ಕಿರೀಟವನ್ನು ದಾವೀದನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಆ ಪಟ್ಟಣದಿಂದ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು.


“ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.


ಇದಾದ ಮೇಲೆ ಯೆಹೋಶುವನು ಮತ್ತು ಅವನ ಸೈನಿಕರು ಗಿಲ್ಗಾಲಿನ ತಮ್ಮ ಪಾಳೆಯಕ್ಕೆ ಹಿಂದಿರುಗಿ ಹೋದರು.


ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು