Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:9 - ಪರಿಶುದ್ದ ಬೈಬಲ್‌

9 ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:9
23 ತಿಳಿವುಗಳ ಹೋಲಿಕೆ  

ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟುಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದೆಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ಆದರೆ ಆ ಜನಾಂಗವು ನನ್ನ ಆಜ್ಞಾಪಾಲನೆಯನ್ನು ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನ್ನು ನೋಡಿ ಆ ಜನಾಂಗಕ್ಕೆ ನಾನು ಮಾಡಬೇಕೆಂದಿದ್ದ ಒಳಿತಿನ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಬಹುದು.


ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.


ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’


ಆದರೆ ಸಮುವೇಲನು ಸೌಲನಿಗೆ, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ನಿರಾಕರಿಸಿರುವೆ. ಈಗ ಆತನೂ ನಿನ್ನನ್ನು ಇಸ್ರೇಲಿನ ರಾಜತ್ವದಿಂದ ನಿರಾಕರಿಸುತ್ತಾನೆ” ಎಂದು ಹೇಳಿದನು.


ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ!


ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!


ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!


ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು