Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:25 - ಪರಿಶುದ್ದ ಬೈಬಲ್‌

25 ರಾಜನಾದ ದಾವೀದನು ಅಬ್ಷಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು. ಅಬ್ಷಾಲೋಮನು ಬೇಡಿಕೊಂಡರೂ ದಾವೀದನು ಹೋಗಲಿಲ್ಲ; ಆದರೆ ದಾವೀದನು ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅರಸನು, “ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಕಷ್ಟವಾಗುವುದು,” ಎನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ; ಅವನನ್ನು ಆಶೀರ್ವದಿಸಿದನು, ಅಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನು ಅವನಿಗೆ - ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ, ಅವನನ್ನು ಆಶೀರ್ವದಿಸಿದನು, ಅಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:25
9 ತಿಳಿವುಗಳ ಹೋಲಿಕೆ  

ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.


ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.


ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು.


ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.


ಅಬ್ಷಾಲೋಮನು ರಾಜನ ಬಳಿಗೆ ಹೋಗಿ, “ನನ್ನ ಕುರಿಗಳ ತುಪ್ಪಟವನ್ನು ಕತ್ತರಿಸಲು ಕೆಲವು ಜನರು ಬರುತ್ತಾರೆ. ದಯವಿಟ್ಟು ನೀವು ನಿಮ್ಮ ಸೇವಕರೊಂದಿಗೆ ಬಂದು ಅದನ್ನು ಗಮನಿಸಿ” ಎಂದನು.


ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು. ರಾಜನಾದ ದಾವೀದನು ಅಬ್ಷಾಲೋಮನಿಗೆ, “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು