Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:12 - ಪರಿಶುದ್ದ ಬೈಬಲ್‌

12 ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಾನು ನಿನಗೆ ಕೆಲವು ಮಾತುಗಳನ್ನು ಹೇಳಲು ಬಿಡು” ಎಂದಳು. “ಹೇಳು” ಎಂದು ರಾಜನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಆ ಸ್ತ್ರೀ, “ನನ್ನ ಒಡೆಯರಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ,” ಎಂದಳು. ಅರಸನು, “ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಸ್ತ್ರೀಯು - ನನ್ನ ಒಡೆಯನಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವದಕ್ಕೆ ಅಪ್ಪಣೆಯಾಗಲಿ ಅನ್ನಲು ಅರಸನು - ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:12
10 ತಿಳಿವುಗಳ ಹೋಲಿಕೆ  

ಅಗ್ರಿಪ್ಪನು ಪೌಲನಿಗೆ, “ಈಗ ನೀನು ನಿನ್ನ ಪರವಾಗಿ ಮಾತಾಡಬಹುದು” ಎಂದು ಹೇಳಿದನು. ಆಗ ಪೌಲನು ತನ್ನ ಕೈಯೆತ್ತಿ ಮಾತಾಡಲಾರಂಭಿಸಿ ಹೀಗೆಂದನು:


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ಅಬೀಗೈಲಳು ದಾವೀದನ ಪಾದಗಳಿಗೆ ಬಿದ್ದು, “ಒಡೆಯನೇ, ನಿನ್ನೊಂದಿಗೆ ಮಾತನಾಡಲು ದಯವಿಟ್ಟು ನನಗೆ ಅವಕಾಶ ಕೊಡು. ನಾನು ಹೇಳುವುದನ್ನು ಆಲಿಸು. ನಡೆದುಹೋದ ಸಂಗತಿಗೆ ನನ್ನನ್ನೇ ನಿಂದಿಸು.


ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.


ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.


ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.


ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.


ಆಗ ಆ ಸ್ತ್ರೀಯು, “ದೇವರ ಜನರ ವಿರುದ್ಧವಾಗಿ ನೀನು ಈ ಕಾರ್ಯಗಳನ್ನು ಮಾಡಲು ಯೋಚಿಸಿರುವುದಾದರೂ ಏಕೆ? ಹೌದು, ನೀನು ಕೊಟ್ಟ ತೀರ್ಪಿನ ಮೂಲಕ ನೀನು ನನ್ನನ್ನು ತಪ್ಪಿತಸ್ಥನೆಂದು ತೋರಿಸಿ ಕೊಟ್ಟಿರುವೆ. ಏಕೆಂದರೆ ನೀನು ಬಲಾತ್ಕಾರದಿಂದ ಮನೆ ಬಿಡಿಸಿದ ಮಗನನ್ನು ಮನೆಗೆ ಕರೆದು ತಂದಿಲ್ಲ.


ಯೋವಾಬನು ಆ ಸ್ತ್ರೀಯೊಂದಿಗೆ ಮಾತಾಡಲು ಹತ್ತಿರಕ್ಕೆ ಬಂದನು. ಅವಳು, “ನೀನು ಯೋವಾಬನೇ?” ಎಂದು ಕೇಳಿದಳು. “ಹೌದು, ನಾನೇ ಯೋವಾಬನು” ಎಂದು ಅವನು ಉತ್ತರಿಸಿದನು. ಆಗ ಅವಳು ಯೋವಾಬಿಗೆ, “ನಾನು ಹೇಳುವುದನ್ನು ಕೇಳು” ಎಂದಳು. “ಆಗಲಿ, ಕೇಳುತ್ತೇನೆ” ಎಂದು ಯೋವಾಬನು ಉತ್ತರಿಸಿದನು.


ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದು ಉತ್ತರಿಸಿದನು. “ಹಾಗಾದರೆ ಹೇಳು” ಎಂದು ಬತ್ಷೆಬೆಳು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು