Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:22 - ಪರಿಶುದ್ದ ಬೈಬಲ್‌

22 ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ - ಅರಸನೇ, ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿತು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:22
13 ತಿಳಿವುಗಳ ಹೋಲಿಕೆ  

ಮಕ್ಕಳು ಎದ್ದುನಿಂತು ಆಕೆಯನ್ನು ಅಭಿನಂದಿಸುವರು. ಗಂಡನು ಅವಳನ್ನು ಹೊಗಳುವನು.


ಅವರಿಗೆ ಬಟ್ಟೆಗಳನ್ನು ಕೊಟ್ಟೆನು. ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು.


ನನ್ನ ಮಾತನ್ನು ಕೇಳಿದವರೆಲ್ಲರೂ ನನ್ನನ್ನು ಪ್ರಶಂಸಿಸುತ್ತಿದ್ದರು; ನಾನು ಮಾಡಿದ್ದನ್ನು ಕಂಡವರೆಲ್ಲರೂ ನನ್ನನ್ನು ಹೊಗಳುತ್ತಿದ್ದರು.


ಕೆಲವರು ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ತಾವೇ ಮುಂದೆ ಬಂದರು. ಉಳಿದವರು ತಾವಾಗಿಯೇ ಮುಂದೆ ಬಂದವರನ್ನು ವಂದಿಸಿ ಆಶೀರ್ವದಿಸಿದರು.


ರಾಜನು ಬರ್ಜಿಲ್ಲೈಯನಿಗೆ ಮುದ್ದಿಟ್ಟು ಆಶೀರ್ವದಿಸಿದನು. ಬರ್ಜಿಲ್ಲೈಯನು ಮನೆಗೆ ಹಿಂದಿರುಗಿದನು. ರಾಜನು ತನ್ನ ಜನರೆಲ್ಲರೊಂದಿಗೆ ನದಿಯನ್ನು ದಾಟಿದನು.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ಒಂದು ದಿನ ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.


ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ.


ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ರಾಜನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ. ಈಗ ಯುವಕನಾದ ಅಬ್ಷಾಲೋಮನನ್ನು ಹಿಂದಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.


ನಂತರ ಯೋವಾಬನು ಮೇಲೆದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರುಸಲೇಮಿಗೆ ಕರೆದುತಂದನು.


ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು