Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:7 - ಪರಿಶುದ್ದ ಬೈಬಲ್‌

7 ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:7
9 ತಿಳಿವುಗಳ ಹೋಲಿಕೆ  

ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.


“ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು. ಆದರೆ ದಾವೀದನು ಮೇಲೇಳಲಿಲ್ಲ. ಅವನು ಈ ನಾಯಕರೊಂದಿಗೆ ಊಟ ಮಾಡಲಿಲ್ಲ.


ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋದ ಅಣ್ಣನ ವಂಶವು ಮುಂದುವರಿಯುವುದು.


ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.


ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ನನಗೆ ಇಬ್ಬರು ಗಂಡುಮಕ್ಕಳಿದ್ದರು. ಈ ಇಬ್ಬರು ಗಂಡುಮಕ್ಕಳು ಜಗಳಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ. ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು.


ಆಗ ರಾಜನು ಆ ಸ್ತ್ರೀಗೆ, “ಮನೆಗೆ ಹಿಂದಿರುಗು. ನಾನು ನಿನ್ನ ವಿಷಯದಲ್ಲಿ ಆಜ್ಞೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು