Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:9 - ಪರಿಶುದ್ದ ಬೈಬಲ್‌

9 ತೆಕೋವದ ಆ ಸ್ತ್ರೀಯು ರಾಜನಿಗೆ, “ರಾಜನಾದ ನನ್ನ ಒಡೆಯನೇ, ದೋಷವೆಲ್ಲವೂ ನನ್ನ ಮೇಲೆಯೇ ಬರಲಿ. ನನ್ನ ಒಡೆಯನಾದ ರಾಜನೇ, ನೀನೂ ನಿನ್ನ ರಾಜ್ಯವೂ ನಿರ್ದೋಷಿಗಳಾಗಿದ್ದೀರಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ತೆಕೋವದ ಸ್ತ್ರೀಯು - ಅರಸನೇ, ಒಡೆಯನೇ, ಅಪರಾಧವು ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸನಿಗೂ ಅವನ ಸಿಂಹಾಸನಕ್ಕೂ ದೋಷಹತ್ತದಿರಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:9
10 ತಿಳಿವುಗಳ ಹೋಲಿಕೆ  

ಅಬೀಗೈಲಳು ದಾವೀದನ ಪಾದಗಳಿಗೆ ಬಿದ್ದು, “ಒಡೆಯನೇ, ನಿನ್ನೊಂದಿಗೆ ಮಾತನಾಡಲು ದಯವಿಟ್ಟು ನನಗೆ ಅವಕಾಶ ಕೊಡು. ನಾನು ಹೇಳುವುದನ್ನು ಆಲಿಸು. ನಡೆದುಹೋದ ಸಂಗತಿಗೆ ನನ್ನನ್ನೇ ನಿಂದಿಸು.


ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.


ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.


“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.


ಅದಕ್ಕೆ ರೆಬೆಕ್ಕಳು ಅವನಿಗೆ, “ಅವನು ನಿನಗೆ ಶಾಪಕೊಟ್ಟರೆ, ಆ ಶಾಪವು ನನಗಾಗಲಿ. ನಾನು ಹೇಳಿದಂತೆ ಮಾಡು. ನನಗೋಸ್ಕರ ಆಡುಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.


ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.


ಆಗ ರಾಜನು ಆ ಸ್ತ್ರೀಗೆ, “ಮನೆಗೆ ಹಿಂದಿರುಗು. ನಾನು ನಿನ್ನ ವಿಷಯದಲ್ಲಿ ಆಜ್ಞೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.


ರಾಜನಾದ ದಾವೀದನು “ನಿನ್ನನ್ನು ದೋಷಿ ಎಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ನಿನಗೆ ಮತ್ತೆ ತೊಂದರೆ ಕೊಡದಂತೆ ನಾನು ನೋಡಿಕೊಳ್ಳುವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು