Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:10 - ಪರಿಶುದ್ದ ಬೈಬಲ್‌

10 ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನು ಗೂಢಚಾರನನ್ನು ಕಳುಹಿಸಿ ಇಸ್ರಯೇಲರ ಎಲ್ಲಾ ಕುಲದವರಿಗೆ, “ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾ‍ಲೋಮನು ಹೆಬ್ರೋನಿನಲ್ಲಿ ಅರಸ’ ಎಂದು ಘೋಷಿಸಿರಿ,” ಎಂದು ಹೇಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲ್ಯರ ಎಲ್ಲಾ ಕುಲದವರಿಗೆ - ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೆ ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಆರ್ಭಟಿಸಿರಿ ಎಂದು ಹೇಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:10
16 ತಿಳಿವುಗಳ ಹೋಲಿಕೆ  

ಇವರೆಲ್ಲರೂ ಧೈರ್ಯಶಾಲಿ ಯೋಧರಾಗಿದ್ದರು. ಇವರೆಲ್ಲಾ ದಾವೀದನನ್ನು ಅರಸನನ್ನಾಗಿ ಮಾಡುವ ಉದ್ದೇಶದಿಂದ ಹೆಬ್ರೋನಿಗೆ ಬಂದರು. ದಾವೀದನು ತಮ್ಮ ಅರಸನಾಗುವುದಕ್ಕೆ ಇಸ್ರೇಲಿನ ಬೇರೆ ಜನರೆಲ್ಲರೂ ಒಪ್ಪಿಗೆಕೊಟ್ಟರು.


ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ:


ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.


ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, “ಯೇಹು ರಾಜನು!” ಎಂದು ಘೋಷಿಸಿದರು.


ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.


ನಾವು ನಮ್ಮನ್ನು ಆಳಲು ಅಬ್ಷಾಲೋಮನನ್ನು ಆರಿಸಿಕೊಂಡೆವು. ಆದರೆ ಅವನೀಗ ಯುದ್ಧದಲ್ಲಿ ಸತ್ತಿದ್ದಾನೆ. ದಾವೀದನನ್ನು ನಾವು ಮತ್ತೆ ರಾಜನನ್ನಾಗಿ ಮಾಡೋಣ” ಎಂದರು.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಆ ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಆ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.


ಅವನು ಏಳು ವರ್ಷ ಆರು ತಿಂಗಳ ಕಾಲ ಹೆಬ್ರೋನಿನಲ್ಲಿದ್ದು ಯೆಹೂದ್ಯರನ್ನು ಆಳಿದನು. ಅವನು ಮೂವತ್ತಮೂರು ವರ್ಷ ಜೆರುಸಲೇಮಿನಲ್ಲಿದ್ದು ಸಮಸ್ತ ಇಸ್ರೇಲನ್ನು ಮತ್ತು ಯೆಹೂದವನ್ನು ಆಳಿದನು.


ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು.


ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.


“ಸಮಾಧಾನದಿಂದ ಹೋಗು” ಎಂದು ರಾಜನಾದ ದಾವೀದನು ಹೇಳಿದನು. ಅಬ್ಷಾಲೋಮನು ಹೆಬ್ರೋನಿಗೆ ಹೋದನು.


ನಾತಾನನಿಗೆ ಇದು ತಿಳಿದಾಗ, ಅವನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಹೋಗಿ, “ಹಗ್ಗೀತಳ ಮಗನಾದ ಅದೋನೀಯನು ಮಾಡುತ್ತಿರುವುದನ್ನು ನೀನು ಕೇಳಿದೆಯಾ? ಅವನು ತನ್ನನ್ನು ತಾನೇ ರಾಜನನ್ನಾಗಿ ಮಾಡಿಕೊಂಡಿದ್ದಾನೆ ಮತ್ತು ನಮ್ಮ ಒಡೆಯನಾದ ರಾಜ ದಾವೀದನಿಗೆ ಇದು ತಿಳಿದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು