Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:12 - ಪರಿಶುದ್ದ ಬೈಬಲ್‌

12 ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:12
26 ತಿಳಿವುಗಳ ಹೋಲಿಕೆ  

ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು.


ನಾಯಕರು ಒಂದು ದಿನವನ್ನು ಉಪವಾಸದ ದಿನವಾಗಿ ಪ್ರಕಟಿಸಿದರು. ಆ ದಿನ ಅವರು ಜನರನ್ನೆಲ್ಲ ಸಭೆಸೇರಿಸಿದರು. ನಾಬೋತನನ್ನು ಜನರೆದುರಿಗೆ ಪ್ರಮುಖವಾದ ಒಂದು ಸ್ಥಳದಲ್ಲಿ ಅವರು ಕುಳ್ಳಿರಿಸಿದರು.


ಆ ಪತ್ರದಲ್ಲಿ ಹೀಗೆ ಬರೆದಿತ್ತು: “ಉಪವಾಸದ ಒಂದು ದಿನವನ್ನು ಗೊತ್ತುಮಾಡಿ, ಆ ದಿನವನ್ನು ಪ್ರಕಟಿಸಿ, ನಂತರ ಪಟ್ಟಣದ ಜನರನ್ನೆಲ್ಲ ಸಭೆ ಸೇರಿಸಿರಿ.


ಬಾಲಾಕನು ಅವನ ಅಪ್ಪಣೆಯ ಮೇರೆಗೆ ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಅರ್ಪಿಸಿದನು.


ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.


ಅಬ್ಷಾಲೋಮನು, ಅಹೀತೋಫೆಲನು ಮತ್ತು ಇಸ್ರೇಲಿನ ಜನರೆಲ್ಲ ಜೆರುಸಲೇಮಿಗೆ ಬಂದರು.


ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,


ಯೆಹೋವನೇ, ದಯವಿಟ್ಟು ನನಗೆ ದಯೆತೋರು; ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು