Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:18 - ಪರಿಶುದ್ದ ಬೈಬಲ್‌

18 ಅವನ ಸೇವಕರೆಲ್ಲ ರಾಜನನ್ನು ದಾಟಿ ಮುಂದೆ ಹೋದರು. ಕೆರೇತ್ಯರು, ಪೆಲೇತ್ಯರು ಮತ್ತು ಗಿತ್ತೀಯರು (ಗತ್‌ನ ಆರುನೂರು ಜನರು) ರಾಜನನ್ನು ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದಾವೀದನ ಎಲ್ಲಾ ಸೇವಕರೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳು ಮತ್ತು ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರು ಅರಸನ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದಾವೀದನ ಎಲ್ಲಾ ಸೇವಕರೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳೂ ಗತ್ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರೂ ಅರಸನ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನ ಸಮಸ್ತ ಸೇವಕರೂ, ಸಮಸ್ತ ಕೆರೇತ್ಯರೂ, ಸಮಸ್ತ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತೀಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:18
16 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.


ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.


ಯೋವಾಬನು ಇಸ್ರೇಲಿನ ಸೈನ್ಯಕ್ಕೆಲ್ಲ ಮುಖ್ಯ ಸೇನಾಪತಿಯಾಗಿದ್ದನು. ಕೆರೇತ್ಯರಿಗೆ ಮತ್ತು ಪೆಲೇತ್ಯರಿಗೆ ಯೆಹೋಯಾದಾವನ ಮಗನಾದ ಬೆನಾಯನು ಅಧಿಪತಿಯಾಗಿದ್ದನು.


ಆದ್ದರಿಂದ ಯೋವಾಬನು ಕೆರೇತ್ಯರ ಪೆಲೇತ್ಯರ ಮತ್ತು ಸೈನಿಕರೆಲ್ಲರ ಸಮೇತವಾಗಿ ಜೆರುಸಲೇಮಿನಿಂದ ಹೊರಟು ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದರು.


ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.


ದಾವೀದನೂ ಅವನ ಜನರೂ ಅವರ ಕುಟುಂಬಗಳವರೂ ಆಕೀಷನೊಂದಿಗೆ ಗತ್‌ನಲ್ಲಿ ನೆಲೆಸಿದರು. ದಾವೀದನ ಜೊತೆಯಲ್ಲಿ ಅವನ ಇಬ್ಬರು ಹೆಂಡತಿಯರೂ ಇದ್ದರು. ಅವರು ಯಾರೆಂದರೆ, ಇಜ್ರೇಲ್ಯಳಾದ ಅಹೀನೋವಮಳು ಮತ್ತು ಕರ್ಮೆಲಿನ ಅಬೀಗೈಲಳು. ಅಬೀಗೈಲಳು ನಾಬಾಲನ ವಿಧವೆ.


ಆದ್ದರಿಂದ ದಾವೀದನು ಮತ್ತು ಅವನ ಜನರು ಕೆಯೀಲಾವನ್ನು ಬಿಟ್ಟುಹೋದರು. ದಾವೀದನ ಜೊತೆಯಲ್ಲಿ ಸುಮಾರು ಆರುನೂರು ಜನರಿದ್ದರು. ದಾವೀದನು ಮತ್ತು ಅವನ ಜನರು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಿದ್ದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂಬುದು ಸೌಲನಿಗೆ ತಿಳಿಯಿತು. ಆದ್ದರಿಂದ ಸೌಲನು ಆ ನಗರಕ್ಕೆ ಹೋಗಲಿಲ್ಲ.


ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.


ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.


ದಾವೀದನು ತನ್ನ ಆರುನೂರು ಜನರೊಂದಿಗೆ ಬೆಸೋರ್ ಹಳ್ಳಕ್ಕೆ ಹೋದನು. ಸುಮಾರು ಇನ್ನೂರು ಜನರು ಬಹಳ ಆಯಾಸಗೊಂಡು ಬಲಹೀನರಾಗಿದ್ದುದರಿಂದ ಅಲ್ಲಿಯೇ ಉಳಿದರು. ಆದ್ದರಿಂದ ದಾವೀದನು ಮತ್ತು ಅವನ ನಾನೂರು ಜನರು ಅಮಾಲೇಕ್ಯರನ್ನು ಅಟ್ಟಿಸಿಕೊಂಡು ಹೋದರು.


ತನ್ನ ಹಿಂಬಾಲಕರೊಂದಿಗೆ ಹೊರಟುಹೋದನು. ಅವನು ಕೊನೆಯ ಮನೆಯ ಹತ್ತಿರ ನಿಂತುಕೊಂಡನು.


ದಾವೀದನು ಗತ್‌ಗೆ ಓಡಿಹೋದನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು ಅವನನ್ನು ಹುಡುಕುವುದನ್ನು ಬಿಟ್ಟುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು