Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:27 - ಪರಿಶುದ್ದ ಬೈಬಲ್‌

27 ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದಲ್ಲದೆ ಅವನು ಯಾಜಕನಾದ ಚಾದೋಕನಿಗೆ - ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು, ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:27
11 ತಿಳಿವುಗಳ ಹೋಲಿಕೆ  

ಯಾಜಕರ ಮಕ್ಕಳಾದ ಯೋನಾತಾನನು ಮತ್ತು ಅಹೀಮಾಚನು ಎನ್-ರೋಗೆಲಿನ ಬುಗ್ಗೆಯ ಹತ್ತಿರ ಕಾದಿದ್ದರು. ತಾವು ನಗರದೊಳಕ್ಕೆ ಹೋಗುವುದನ್ನು ಯಾರೂ ನೋಡಬಾರದೆಂದು ಅವರು ಅಲ್ಲಿ ಅಡಗಿಕೊಂಡಿದ್ದರು. ಆದ್ದರಿಂದ ಕೆಲಸದ ಹುಡುಗಿಯೊಬ್ಬಳು ಹೊರಗೆ ಬಂದು ಅವರಿಗೆ ಆ ಸಂದೇಶವನ್ನು ತಿಳಿಸಿದಳು. ಬಳಿಕ ಯೋನಾತಾನನು ಮತ್ತು ಅಹೀಮಾಚನು ದಾವೀದ ರಾಜನ ಬಳಿಗೆ ಹೋಗಿ ಅದನ್ನು ತಿಳಿಸಿದರು.


(ಹಿಂದಿನ ಕಾಲದಲ್ಲಿ ಇಸ್ರೇಲರು ಪ್ರವಾದಿಯನ್ನು “ದರ್ಶಿ” ಎಂದು ಕರೆಯುತ್ತಿದ್ದರು. ದೇವರಿಂದ ಏನಾದರೂ ಕೇಳಬೇಕಾಗಿದ್ದರೆ, “ದರ್ಶಿಯ ಬಳಿಗೆ ಹೋಗೋಣ” ಎನ್ನುತ್ತಿದ್ದರು.)


ಇವರೆಲ್ಲರೂ ಹೇಮಾನನ ಮಕ್ಕಳು. ಹೇಮಾನನು ದಾವೀದನ ಪ್ರವಾದಿಯಾಗಿದ್ದನು. ಅವನನ್ನು ಬಲಿಷ್ಠನನ್ನಾಗಿ ಮಾಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಹುಟ್ಟಿದರು.


ದಾವೀದನು ಹೊತ್ತಾರೆಯಲ್ಲಿ ಎದ್ದಾಗ, ಅವನ ದರ್ಶಿಯಾದ ಗಾದನಿಗೆ ಯೆಹೋವನ ಮಾತುಗಳು ಬಂದವು.


ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಯಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು.


ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.


ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.


ಯೋವಾಬನು ಮಾತನಾಡುತ್ತಿದ್ದಂತೆ, ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು, “ಇಲ್ಲಿಗೆ ಬಾ! ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ನೀನು ನನಗೆ ಶುಭ ಸಮಾಚಾರವನ್ನೇ ತಂದಿರುವೆ” ಎಂದು ಹೇಳಿದನು.


ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು.


ಅಹೀಟೂಬನ ಮಗ ಚಾದೋಕ. ಚಾದೋಕನ ಮಗ ಅಹೀಮಾಚ.


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ಈ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು