Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:3 - ಪರಿಶುದ್ದ ಬೈಬಲ್‌

3 ಆಗ ಅಬ್ಷಾಲೋಮನು ಆ ಮನುಷ್ಯನಿಗೆ, “ನೋಡು, ನಿನ್ನ ಬೇಡಿಕೆಗಳು ಸರಿಯಾಗಿವೆ. ಆದರೆ ರಾಜನಾದ ದಾವೀದನು ನಿನ್ನ ಮಾತುಗಳನ್ನು ಕೇಳುವುದಿಲ್ಲ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅಬ್ಷಾಲೋಮನು‍, “ನೋಡಿ, ನಿಮ್ಮ ವ್ಯಾಜ್ಯ ಒಳ್ಳೆಯದು ಹಾಗು ನ್ಯಾಯವಾದದ್ದು. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ರಾಜಪ್ರತಿನಿಧಿ ಒಬ್ಬನೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅಬ್ಷಾಲೋಮನು - ನೋಡು, ನಿನ್ನ ಕಾರ್ಯವು ಒಳ್ಳೇದೂ ನ್ಯಾಯವಾದದ್ದೂ ಆಗಿದೆ; ಆದರೆ ವ್ಯಾಜ್ಯಗಳನ್ನು ವಿಚಾರಿಸುವದಕ್ಕೆ ಅರಸನಿಂದ ಒಬ್ಬನೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅಬ್ಷಾಲೋಮನು ಅವನಿಗೆ, “ನೋಡು ನಿನ್ನ ಕಾರ್ಯವು ಒಳ್ಳೆಯದೂ, ನ್ಯಾಯವಾದದದ್ದೂ ಆಗಿದೆ. ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವುದಕ್ಕೆ ಯಾವನೂ ಇಲ್ಲ,” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:3
16 ತಿಳಿವುಗಳ ಹೋಲಿಕೆ  

ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.


ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.


‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’ ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’ ಎಂಬುದೂ ದೇವರ ಆಜ್ಞೆ.


“ಆ ರಾಜನ ತರುವಾಯ ಅತಿ ಕ್ರೂರನೂ ದ್ವೇಷಮಯಿಯೂ ಆದ ಒಬ್ಬನು ರಾಜನಾಗುವನು. ಅವನು ರಾಜ ಮನೆತನದವನಾಗಿರುವದಿಲ್ಲ. ಅವನು ವಂಚನೆಯಿಂದ ರಾಜನಾಗಿರುತ್ತಾನೆ. ಜನರು ನೆಮ್ಮದಿಯಿಂದ ನಿರ್ಭಯರಾಗಿರುವಾಗ ಅವನು ರಾಜ್ಯದ ಮೇಲೆ ಧಾಳಿ ಮಾಡುತ್ತಾನೆ.


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.


ಯೆಹೋವನು ಒಳ್ಳೆಯವನನ್ನು ಸ್ವೀಕರಿಸಿಕೊಳ್ಳುವನು; ಕುಯುಕ್ತಿಯುಳ್ಳವನನ್ನು ಖಂಡಿಸುವನು.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.


“ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನನ್ನೂ ಕೊಲ್ಲಬೇಕು.


“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


ಅಲ್ಲದೆ ಅಬ್ಷಾಲೋಮನು, “ಯಾರಾದರೂ ನನ್ನನ್ನು ಈ ದೇಶದಲ್ಲಿ ನ್ಯಾಯಾಧೀಶನನ್ನಾಗಿ ಮಾಡಿದ್ದರೆ ಒಳ್ಳೆಯದಾಗುತ್ತಿತ್ತು. ತೀರ್ಪಿಗಾಗಿ ತಮ್ಮ ತೊಂದರೆಗಳೊಂದಿಗೆ ಬರುವ ಪ್ರತಿಯೊಬ್ಬನಿಗೂ ಆಗ ನಾನು ಸಹಾಯ ಮಾಡಬಹುದಾಗಿತ್ತು. ಅವನ ತೊಂದರೆಗೆ ತೃಪ್ತಿಕರವಾದ ಪರಿಹಾರವನ್ನು ನೀಡಲು ನಾನು ಸಹಾಯ ಮಾಡಬಹುದಾಗಿತ್ತು” ಎಂದು ಹೇಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು