Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:31 - ಪರಿಶುದ್ದ ಬೈಬಲ್‌

31 ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:31
23 ತಿಳಿವುಗಳ ಹೋಲಿಕೆ  

ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.


ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.


ದೇವರು ಯುಕ್ತಿವಂತರ ಕುತಂತ್ರಗಳನ್ನು ವಿಫಲಗೊಳಿಸಿ ಭಂಗಪಡಿಸುವನು.


ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.


ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುವಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ಆದರೆ ಅಬ್ಷಾಲೋಮನು, “ಈಗ ಅರ್ಕೀಯನಾದ ಹೂಷೈಯನನ್ನು ಕರೆಯಿರಿ. ಅವನು ಏನು ಹೇಳುತ್ತಾನೆಂಬುದನ್ನು ನಾನು ಕೇಳಬೇಕಾಗಿದೆ” ಎಂದು ಹೇಳಿದನು.


ಹೂಷೈಯು ಅಬ್ಷಾಲೋಮನಿಗೆ, “ಈ ಸಮಯದಲ್ಲಿ ಅಹೀತೋಫೆಲನ ಸಲಹೆಯು ಸರಿಯಲ್ಲ” ಎಂದು ಹೇಳಿದನು.


ಹಗಲಿರುಳು, ಈ ನಗರದಲ್ಲೆಲ್ಲಾ ಅಪರಾಧ ಮತ್ತು ಬಲಾತ್ಕಾರಗಳು ತುಂಬಿಕೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು