Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:32 - ಪರಿಶುದ್ದ ಬೈಬಲ್‌

32 ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ, ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿದಾಗ, ಅರ್ಕಿಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅವನನ್ನು ಎದುರುಗೊಳ್ಳಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:32
20 ತಿಳಿವುಗಳ ಹೋಲಿಕೆ  

ಲೂಜ್ ಎಂದು ಕರೆಯುವ ಬೇತೇಲಿನಿಂದ ಅಟಾರೋತಿನಲ್ಲಿ ಅರ್ಕೀಯರ ಸೀಮೆಗೆ ಹೋಗುತ್ತದೆ.


ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.


ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ,


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.


ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.


ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.


ದಾವೀದನು ಆಲೀವ್ ಬೆಟ್ಟದ ಮೇಲೆ ಸ್ವಲ್ಪ ದೂರ ಬಂದನು. ಅಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ದಾವೀದನನ್ನು ಸಂಧಿಸಿದನು. ಚೀಬನ ಹತ್ತಿರ ತಡಿಹಾಕಲ್ಪಟ್ಟ ಎರಡು ಹೇಸರಕತ್ತೆಗಳಿದ್ದವು. ಆ ಹೇಸರಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳು, ಒಂದುನೂರು ಗೊಂಚಲು ಒಣದ್ರಾಕ್ಷಿ, ಒಂದುನೂರು ಹಣ್ಣುಗಳು ಮತ್ತು ದ್ರಾಕ್ಷಾರಸದ ಒಂದು ಚೀಲ ಇದ್ದವು.


ಆದರೆ ಅಬ್ಷಾಲೋಮನು, “ಈಗ ಅರ್ಕೀಯನಾದ ಹೂಷೈಯನನ್ನು ಕರೆಯಿರಿ. ಅವನು ಏನು ಹೇಳುತ್ತಾನೆಂಬುದನ್ನು ನಾನು ಕೇಳಬೇಕಾಗಿದೆ” ಎಂದು ಹೇಳಿದನು.


ಆಶೇರಿಗೂ ಅಲೋತಿಗೂ ಹೂಷೈಯನ ಮಗ ಬಾಣನು ರಾಜ್ಯಪಾಲನಾಗಿದ್ದನು.


ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು.


ಅಬ್ಷಾಲೋಮನು, ಅಹೀತೋಫೆಲನು ಮತ್ತು ಇಸ್ರೇಲಿನ ಜನರೆಲ್ಲ ಜೆರುಸಲೇಮಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು