Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:4 - ಪರಿಶುದ್ದ ಬೈಬಲ್‌

4 ಅಲ್ಲದೆ ಅಬ್ಷಾಲೋಮನು, “ಯಾರಾದರೂ ನನ್ನನ್ನು ಈ ದೇಶದಲ್ಲಿ ನ್ಯಾಯಾಧೀಶನನ್ನಾಗಿ ಮಾಡಿದ್ದರೆ ಒಳ್ಳೆಯದಾಗುತ್ತಿತ್ತು. ತೀರ್ಪಿಗಾಗಿ ತಮ್ಮ ತೊಂದರೆಗಳೊಂದಿಗೆ ಬರುವ ಪ್ರತಿಯೊಬ್ಬನಿಗೂ ಆಗ ನಾನು ಸಹಾಯ ಮಾಡಬಹುದಾಗಿತ್ತು. ಅವನ ತೊಂದರೆಗೆ ತೃಪ್ತಿಕರವಾದ ಪರಿಹಾರವನ್ನು ನೀಡಲು ನಾನು ಸಹಾಯ ಮಾಡಬಹುದಾಗಿತ್ತು” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವ್ಯಾಜ್ಯವಾಗಲಿ ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ನಾಡಿನ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಸೂಚಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವ್ಯಾಜ್ಯವಾಗಲಿ ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇವಿುಸಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಅಬ್ಷಾಲೋಮನು, “ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ನೇಮಕವಾಗಿದ್ದರೆ ಎಷ್ಟೋ ಒಳ್ಳೆಯದು. ಆಗ ವ್ಯಾಜ್ಯವಾದರೂ, ನ್ಯಾಯವಿಚಾರಣೆಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ, ನಾನು ಅವನಿಗೆ ನೀತಿಯಿಂದ ನ್ಯಾಯತೀರಿಸುವೆನು,” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:4
7 ತಿಳಿವುಗಳ ಹೋಲಿಕೆ  

ನೀವು ನನಗೆ ಈ ಜನರ ಅಧಿಕಾರಿಯನ್ನಾಗಿ ಮಾಡಿದರೆ, ನಾನು ಅಬೀಮೆಲೆಕನನ್ನು ನಾಶಮಾಡುತ್ತೇನೆ. ನಾನು ಅವನಿಗೆ, ‘ನಿನ್ನ ಸೈನ್ಯವನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಬಾ’ ಎಂದು ಕರೆಯುತ್ತೇನೆ” ಎಂದನು.


ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.


ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.


ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.


ಯಾವನಾದರೂ ಅಬ್ಷಾಲೋಮನ ಹತ್ತಿರಕ್ಕೆ ಬಂದು ಸಾಷ್ಟಾಂಗನಮಸ್ಕಾರಮಾಡಲು ಬಾಗಿದಾಗ, ಅಬ್ಷಾಲೋಮನು ಕೈಚಾಚಿ ಅವನನ್ನು ಅಪ್ಪಿಕೊಂಡು ಮುದ್ದಿಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು