Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:12 - ಪರಿಶುದ್ದ ಬೈಬಲ್‌

12 ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:12
22 ತಿಳಿವುಗಳ ಹೋಲಿಕೆ  

ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.


ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ಯೆಹೋವನೇ, ನನ್ನ ಸಂಕಟವನ್ನೂ ತೊಂದರೆಗಳನ್ನೂ ನೋಡು. ನನ್ನ ಪಾಪಗಳನ್ನೆಲ್ಲ ಕ್ಷಮಿಸು.


ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ?


ಆದ್ದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.


ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.


ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೋ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.


ಯೆಹೋವನೇ, ದಾವೀದನು ಅನುಭವಿಸಿದ ಕಷ್ಟವನ್ನು ಜ್ಞಾಪಿಸಿಕೋ.


ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು.


ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.


ಅಮ್ಮೋನಿಯರೊಂದಿಗಾಗಲಿ ಮೋವಾಬ್ಯರೊಂದಿಗಾಗಲಿ ನೀವು ಸಂಧಾನ ಮಾಡಿಕೊಳ್ಳಲೇಬಾರದು; ನಿಮ್ಮ ಜೀವಮಾನವೆಲ್ಲಾ ಅವರೊಂದಿಗೆ ಸ್ನೇಹತ್ವದಲ್ಲಿರಬಾರದು.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು