Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:2 - ಪರಿಶುದ್ದ ಬೈಬಲ್‌

2 ರಾಜನಾದ ದಾವೀದನು ಚೀಬನಿಗೆ, “ಈ ವಸ್ತುಗಳೆಲ್ಲ ಏತಕ್ಕಾಗಿ?” ಎಂದು ಕೇಳಿದನು. ಚೀಬನು, “ಹೇಸರಕತ್ತೆಗಳನ್ನು ರಾಜನ ಕುಟುಂಬದವರು ಸವಾರಿ ಮಾಡುವುದಕ್ಕಾಗಿಯೂ ರೊಟ್ಟಿಗಳನ್ನು ಮತ್ತು ಹಣ್ಣುಗಳನ್ನು ಸೇವಕರು ತಿನ್ನುವುದಕ್ಕಾಗಿಯೂ ತಂದಿದ್ದೇನೆ. ಅರಣ್ಯದಲ್ಲಿ ಶಕ್ತಿಗುಂದಿಹೋದವನು ದ್ರಾಕ್ಷಾರಸವನ್ನು ಕುಡಿಯಲಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ಚೀಬನನ್ನು - ಇವುಗಳನ್ನು ಯಾಕೆ ತಂದಿ ಎಂದು ಕೇಳಲು ಅವನು - ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವದಕ್ಕಾಗಿಯೂ ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನುವದಕ್ಕಾಗಿಯೂ ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕಾಗಿಯೂ ತಂದಿದ್ದೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನು ಚೀಬನಿಗೆ, “ಇವು ಏಕೆ,” ಎಂದನು. ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:2
13 ತಿಳಿವುಗಳ ಹೋಲಿಕೆ  

ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.


“ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!


“ನಿನ್ನ ಜನರು ಅದು ಏನು ಎಂದು ವಿವರಿಸಲು ಹೇಳುವರು.


ಮೆಫೀಬೋಶೆತನು, “ರಾಜನಾದ ನನ್ನ ಒಡೆಯನೇ, ನನ್ನ ಸೇವಕನಾದ ಚೀಬನು ನನಗೆ ಮೋಸಮಾಡಿದನು. ನಾನು ಚೀಬನಿಗೆ, ‘ನಾನು ಕುಂಟನಾಗಿರುವದರಿಂದ ತಡಿಯೊಂದನ್ನು ಹೇಸರಕತ್ತೆಯ ಮೇಲೆ ಹಾಕು. ನಾನು ಹೇಸರಕತ್ತೆಯ ಮೇಲೆ ಕುಳಿತು, ರಾಜನೊಂದಿಗೆ ಹೋಗುತ್ತೇನೆ’ ಎಂದೆನು.


ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.


ಇದಾದನಂತರ, ಅಬ್ಷಾಲೋಮನು ತನಗಾಗಿ ರಥವನ್ನೂ ಕುದರೆಗಳನ್ನೂ ಪಡೆದನು. ಅವನು ರಥವನ್ನು ನಡೆಸುವಾಗ ಅವನ ಮುಂದೆ ಓಡಲು ಐವತ್ತು ಜನರಿದ್ದರು.


ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು.


ಸೈನಿಕನೊಬ್ಬ ಯೋನಾತಾನನಿಗೆ, “‘ಈ ದಿನ ಸಾಯಂಕಾಲದೊಳಗೆ ಊಟಮಾಡುವವನು ಶಾಪಗ್ರಸ್ತನಾಗಲಿ’ ಎಂದು ನಿಮ್ಮ ತಂದೆ ಆಣೆಯಿಟ್ಟು ಹೇಳಿದ್ದಾನೆ ಆದಕಾರಣವೇ ಸೈನಿಕರು ಬಲಹೀನರಾಗಿದ್ದಾರೆ” ಎಂದು ತಿಳಿಸಿದನು.


ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು. ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿಕೊಟ್ಟೆನು” ಎಂದು ಹೇಳಿದನು.


ಅಬೀಮೆಲೆಕನು ಅಬ್ರಹಾಮನಿಗೆ, “ಈ ಏಳು ಕುರಿಗಳನ್ನು ಇಲ್ಲಿ ಇರಿಸಿರುವುದೇಕೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು