Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:3 - ಪರಿಶುದ್ದ ಬೈಬಲ್‌

3 ರಾಜನು, “ಮೆಫೀಬೋಶೆತನು ಎಲ್ಲಿ?” ಎಂದು ಕೇಳಿದನು. ಚೀಬನು ರಾಜನಿಗೆ, “ಮೆಫೀಬೋಶೆತನು ಜೆರುಸಲೇಮಿನಲ್ಲಿಯೇ ಇದ್ದಾನೆ. ಯಾಕೆಂದರೆ ‘ಇಸ್ರೇಲರು ನನ್ನ ತಾತನ ರಾಜ್ಯಾಧಿಕಾರವನ್ನು ಈ ದಿನ ನನಗೆ ಹಿಂದಕ್ಕೆ ಕೊಡುತ್ತಾರೆ’ ಎಂಬುದು ಅವನ ಆಲೋಚನೆಯಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನು ಮತ್ತೆ, “ನಿನ್ನ ಯಜಮಾನನ ಮಗ ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಯೇಲರು ಈ ದಿನ ತನಗೆ ಮರಳಿಕೊಡುವರೆಂದು ಹೇಳಿ ಅವನು ಜೆರುಸಲೇಮಿನಲ್ಲೇ ಉಳಿದುಕೊಂಡನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನು ತಿರಿಗಿ ಅವನನ್ನು - ನಿನ್ನ ಯಜಮಾನನ ಮಗನು ಎಲ್ಲಿದ್ದಾನೆಂದು ಕೇಳಲು ಅವನು - ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲ್ಯರು ಈಹೊತ್ತು ತನಗೆ ತಿರಿಗಿ ಕೊಡುವರೆಂದು ಹೇಳಿ ಅವನು ಯೆರೂಸಲೇವಿುನಲ್ಲೇ ಉಳುಕೊಂಡನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅರಸನು ಅವನನ್ನು, “ನಿನ್ನ ಯಜಮಾನನ ಪುತ್ರನು ಎಲ್ಲಿದ್ದಾನೆ?” ಎಂದು ಕೇಳಿದನು. ಚೀಬನು ಅರಸನಿಗೆ, “ಅವನು ಯೆರೂಸಲೇಮಿನಲ್ಲಿದ್ದಾನೆ. ಏಕೆಂದರೆ ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರುಗಿ ಕೊಡುವರೆಂದು ಹೇಳಿಕೊಂಡನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:3
13 ತಿಳಿವುಗಳ ಹೋಲಿಕೆ  

ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.


ಸುಳ್ಳುಸಾಕ್ಷಿಯು ನಾಶವಾಗುವನು. ಆದರೆ ಎಚ್ಚರಿಕೆಯಿಂದ ಕೇಳುವವನು ಮಾತಾಡುತ್ತಲೇ ಇರುವನು.


ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು.


ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.


ಯೆಹೋವನೇ, ಸ್ನೇಹಿತರೆಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ.


ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.


“ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಚೀಬನು, “ನಾನು ನಿನಗೆ ಸಾಷ್ಟಾಂಗನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು