2 ಸಮುಯೇಲ 17:10 - ಪರಿಶುದ್ದ ಬೈಬಲ್10 ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಸಿಂಹಹೃದಯರಾದ ಶೂರರ ಎದೆಯೂ ಕರಗಿ ನೀರಾಗುವದು. ನಿನ್ನ ತಂದೆಯು ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲ್ಯರು ಬಲ್ಲರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು. ಅಧ್ಯಾಯವನ್ನು ನೋಡಿ |
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.