Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:12 - ಪರಿಶುದ್ದ ಬೈಬಲ್‌

12 ದಾವೀದನನ್ನು ಅವನು ಅಡಗಿಕೊಂಡಿರುವ ಸ್ಥಳದಲ್ಲಿಯೇ ನಾವು ಹಿಡಿದುಕೊಳ್ಳುತ್ತೇವೆ. ಮಂಜಿನ ಹನಿಗಳು ಭೂಮಿಯ ಮೇಲೆ ಬೀಳುವಂತೆ ನಾವು ದಾವೀದನ ಮೇಲೆ ಬೀಳುವೆವು. ದಾವೀದನನ್ನು ಮತ್ತು ಅವನ ಜನರೆಲ್ಲರನ್ನು ನಾವು ಕೊಲ್ಲುವೆವು. ಯಾರನ್ನೂ ಜೀವಸಹಿತ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ನೆಲದ ಮೇಲೆ ಇಬ್ಬನಿ ಹೇಗೋ ಹಾಗೆಯೇ ಅವರ ಮೇಲೆ ಎರಗೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಇಬ್ಬನಿಯು ನೆಲದ ಮೇಲೆ ಹೇಗೋ ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ನಾವು ಅವನನ್ನು ಕಂಡುಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು, ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ, ಅವನ ಸಂಗಡ ಇರುವ ಸಮಸ್ತ ಜನರಲ್ಲಿ ಒಬ್ಬನಾದರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:12
8 ತಿಳಿವುಗಳ ಹೋಲಿಕೆ  

ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದ್ದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವದೇನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’”


ನಾನು ಬಾವಿಗಳನ್ನು ತೋಡಿ ಹೊಸ ಸ್ಥಳಗಳಲ್ಲಿ ನೀರು ಕುಡಿದೆನು. ನಾನು ಈಜಿಪ್ಟಿನ ನದಿಗಳನ್ನು ಬತ್ತಿಸಿದ್ದೇನೆ; ಆ ದೇಶದ ಮೇಲೆಲ್ಲಾ ನಡೆದಾಡಿದ್ದೇನೆ’ ಎಂದು ನೀನು ಹೇಳಿದೆ.


‘ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.


ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”


ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು